‘ಮೂರು ಪಕ್ಷಗಳೂ ಈಗಾಗಲೇ ಭ್ರಷ್ಟಾಚಾರ, ಸ್ವಜನ ಪಕ್ಷಪಾತದಲ್ಲಿ ಮುಳುಗಿಹೋಗಿ ಜನರ ಕಲ್ಯಾಣವನ್ನೇ ಮರೆತಿವೆ. ರಾಜ್ಯದಲ್ಲಿ ಭ್ರಷ್ಟಾಚಾರ ಅತಿಯಾಗಿದ್ದು, ಜನರು ಸಂಕಷ್ಟದಲ್ಲಿದ್ದರೂ ಅವರನ್ನು ಕೇಳುವವರು ಇಲ್ಲದಂತಾಗಿದೆ. ರಾಜ್ಯದ ಬೊಕ್ಕಸ ಖಾಲಿಯಾಗಿದ್ದು, ಈಗಾಗಲೇ ಅತಿಯಾದ ಸಾಲದ ಭಾರದಿಂದ ನಲುಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ನೌಕರರಿಗೂ ಸಂಬಳ ನೀಡಲು ಹಣವಿಲ್ಲದ ಪರಿಸ್ಥಿತಿ ಬರಲಿದೆ. ಜನರಿಂದ ನಾನಾ ರೀತಿಯ ತೆರಿಗೆ ಮತ್ತು ಶುಲ್ಕಗಳನ್ನು ವಸೂಲಿ ಮಾಡಲಾಗುತ್ತಿದೆ. ಪೆಟ್ರೋಲ್–ಡೀಸೆಲ್ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದ್ದು, ಈ ಏರಿಕೆಗೆ ಕೊನೆಯೇ ಇಲ್ಲದಂತಾಗಿದೆ’ ಎಂದು ಟೀಕಿಸಿದರು.