ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇಡಂ: ಕರವೇ ಪದಾಧಿಕಾರಿಗಳ ಬಂಧನ, ಬಿಡುಗಡೆ

Last Updated 19 ನವೆಂಬರ್ 2019, 6:10 IST
ಅಕ್ಷರ ಗಾತ್ರ

ಸೇಡಂ (ಕಲಬುರ್ಗಿ ಜಿಲ್ಲೆ): ಎಲ್‌ಟಿಟಿ ಮತ್ತು ಇಂಟರ್ ಸಿಟಿ ರೈಲು ನಿಲುಗಡೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಪದಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ರೈಲು ತಡೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ಬಂಧಿಸಿ ಬಿಡುಗಡೆ ಮಾಡಿದ್ದಾರೆ.

ಅನೇಕ ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಕೊಟ್ಟರೂ ರೈಲು ನಿಲುಗಡೆಯಾಗಿಲ್ಲ. ಆದ್ದರಿಂದ ರೈಲು ಹಳಿ ಮೇಲೆ ಮಲಗಿ ಪ್ರತಿಭಟಿಸುವುದಾಗಿ ಮನವಿ ಪೊಲೀಸ್ ಇಲಾಖೆಯ ಗಮನಕ್ಕೆ ತಂದಿದ್ದರು. ಆದರೆ ರೈಲು ತಡೆಗೆ ಮುಂದಾದಾಗ ರೈಲ್ವೆ ಪೊಲೀಸರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ 6ಕ್ಕೆ ಬಂಧಿಸಿ ಬಿಡುಗಡೆಗೊಳಿಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕ ಅಧ್ಯಕ್ಷ ರಾಮಚಂದ್ರ ಗುತ್ತೇದಾರ ಸೇರಿದಂತೆ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT