ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ನಿಲ್ದಾಣದಲ್ಲಿ ನಿಲ್ಲಿಸಿದ್ದ KSRTC ಬಸ್ ಕಳ್ಳತನ ಮಾಡಿದ ಕಳ್ಳರು

Last Updated 21 ಫೆಬ್ರುವರಿ 2023, 5:21 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ‌ಸಂಸ್ಥೆಗೆ(ಕೆಕೆಆರ್‌ಟಿಸಿ) ಸೇರಿದ್ದ ಬಸ್ ಕಳುವಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಬೀದರ್ ಬಸ್ ಡಿಪೋ- 2ಗೆ ಸೇರಿದ ಕೆಎ 38 ಎಫ್ 971 ಸಂಖ್ಯೆಯ ಬಸ್ ಕಳುವಾಗಿದೆ.

ಬೆಳಿಗ್ಗೆ ಸುಮಾರು 3:30ರ ವೇಳೆಗೆ ಕಳ್ಳತನ ಮಾಡಿದ ಖದಿಮರು, ಮಿರಿಯಾಣ ಮಾರ್ಗವಾಗಿ ತಾಂಡೂರು ಮೂಲಕ ತೆಲಂಗಾಣದ ಕಡೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗುತ್ತಿದೆ.

ಬಸ್ ಹುಡುಕಾಟಕ್ಕಾಗಿ ಎರಡು ಪೊಲೀಸ್ ತಂಡಗಳು ತೆಲಂಗಾಣಕ್ಕೆ ತೆರಳಿವೆ. ಸ್ಥಳಕ್ಕೆ ಚಿಂಚೋಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT