ಕಲಬುರಗಿ: ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ(ಕೆಕೆಆರ್ಟಿಸಿ) ಸೇರಿದ್ದ ಬಸ್ ಕಳುವಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಬೀದರ್ ಬಸ್ ಡಿಪೋ- 2ಗೆ ಸೇರಿದ ಕೆಎ 38 ಎಫ್ 971 ಸಂಖ್ಯೆಯ ಬಸ್ ಕಳುವಾಗಿದೆ.
ಬೆಳಿಗ್ಗೆ ಸುಮಾರು 3:30ರ ವೇಳೆಗೆ ಕಳ್ಳತನ ಮಾಡಿದ ಖದಿಮರು, ಮಿರಿಯಾಣ ಮಾರ್ಗವಾಗಿ ತಾಂಡೂರು ಮೂಲಕ ತೆಲಂಗಾಣದ ಕಡೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗುತ್ತಿದೆ.
ಬಸ್ ಹುಡುಕಾಟಕ್ಕಾಗಿ ಎರಡು ಪೊಲೀಸ್ ತಂಡಗಳು ತೆಲಂಗಾಣಕ್ಕೆ ತೆರಳಿವೆ. ಸ್ಥಳಕ್ಕೆ ಚಿಂಚೋಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.