<p>ಚಿಂಚೋಳಿ: ದುಡಿಯಲೆಂದು ಮುಂಬೈ, ಪುಣೆ, ಹೈದರಾಬಾದ್ ಮುಂತಾದ ಕಡೆ ಹೋಗಿದ್ದ ವಲಸೆ ಕಾರ್ಮಿಕರು ಕೊರೊನಾ ಪ್ರಕರಣಗಳು ಉಲ್ಬಣಿಸುತ್ತಿರುವ ಕಾರಣ ಪುನಃ ಚಿಂಚೋಳಿ ತಾಲ್ಲೂಕಿಗೆ ಮರಳುತ್ತಿದ್ದಾರೆ.</p>.<p>ಪ್ರಸಕ್ತ ವರ್ಷ ಅಂದಾಜು 9 ಸಾವಿರಕ್ಕೂ ಹೆಚ್ಚು ಮಂದಿ ಮುಂಬೈಗೆ ಹೋಗಿದ್ದರು. ಇದರಲ್ಲಿ 4,500 ಮಂದಿ ಈಗಾಗಲೇ ಮರಳಿದ್ದಾರೆ. ಕೆಲವರು ಮುಂಬೈಯಲ್ಲೇ ಕಾಯಂ ನೆಲೆ ಕಂಡುಕೊಂಡಿದ್ದು, ಇನ್ನೂ 4 ಸಾವಿರ ಮಂದಿ ಮರಳುವವರಿದ್ದಾರೆ. ಮಹಾರಾಷ್ಟ್ರದ ಗಡಿಯಲ್ಲಿ ಚೆಕ್ಪೋಸ್ಟ್ ತೆರೆದು ಮರಳುತ್ತಿರುವ ಕಾರ್ಮಿಕರ ತಪಾಸಣೆ ನಡೆಸುತ್ತಿದ್ದಾರೆ.</p>.<p>‘ತಾಲ್ಲೂಕಿಗೆ ವಾಪಸ್ಸಾದ ವಲಸೆ ಕಾರ್ಮಿಕರ ಬಗ್ಗೆ ನಿಖರ ಮಾಹಿತಿ ಇಲ್ಲ. ಆದರೆ, ವಲಸೆಯಿಂದ ಹಿಂದಿರುಗಿದ 600ಕ್ಕೂ ಹೆಚ್ಚು ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಜತೆಗೆ ಆಶಾ ಕಾರ್ಯಕರ್ತೆಯರಿಗೆ ಜಾಗ್ರತೆಯಿಂದ ಇರುವಂತೆ ಸೂಚಿಸಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಮಹಮ್ಮದ್ ಗಫಾರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಳೆದ ವರ್ಷ ಕ್ವಾರಂಟೈನ್ ಕೇಂದ್ರಗಳು ತೆರೆದಿದ್ದರಿಂದ ಗುಳೆಯಿಂದ ಮರಳಿದವರ ಮಾಹಿತಿ ಬೇಗ ಲಭಿಸುತ್ತಿತ್ತು. ಆದರೆ, ಈಗ ಮಾಹಿತಿ ಕಲೆ ಹಾಕುವುದು ಕಷ್ಟಸಾಧ್ಯ. ಕೊರೊನಾ ನಿಯಂತ್ರಣಕ್ಕೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಪುರಸಭೆಗೆ ಇಬ್ಬರು ಮತ್ತು 4 ಗ್ರಾಮ ಪಂಚಾಯಿತಿಗೆ ಒಬ್ಬರಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಇನ್ಸಿಡೆಂಟ್ ಕಮಾಂಡರ್ಗಳಾಗಿ ಜಿಲ್ಲಾಧಿಕಾರಿ ವಿವಿ ಜ್ಯೋತ್ಸ್ಯಾ ಅವರು ನೇಮಿಸಿದ್ದಾರೆ’ ಎಂದು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ತಿಳಿಸಿದರು.</p>.<p class="Briefhead">‘ಕಂಟೇನ್ಮೆಂಟ್ ವಲಯಕ್ಕೆ ಕ್ರಮ’</p>.<p>ಚಿಂಚೋಳಿ ತಾಲ್ಲೂಕಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. 100 ಮೀಟರ್ ಅಂತರದಲ್ಲಿ 5 ಜನರಲ್ಲಿ ಸೋಂಕು ದೃಢಪಟ್ಟಲ್ಲಿ, ಅಂತಹ ಸ್ಥಳಗಳನ್ನು ಕಂಟೇನ್ಮೆಂಟ್ ವಲಯವೆಂದು ಘೋಷಿಸಲಾಗುವುದು. ತಾಲ್ಲೂಕಿನ ಶಿವರೆಡ್ಡಿಪಳ್ಳಿ ಹಾಗೂ ಮರಪಳ್ಳಿ ಗ್ರಾಮದಲ್ಲಿ ಕಂಟೇನ್ಮೆಂಟ್ ವಲಯ ಘೋಷಿಸಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಹಮ್ಮದ್ ಗಫಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂಚೋಳಿ: ದುಡಿಯಲೆಂದು ಮುಂಬೈ, ಪುಣೆ, ಹೈದರಾಬಾದ್ ಮುಂತಾದ ಕಡೆ ಹೋಗಿದ್ದ ವಲಸೆ ಕಾರ್ಮಿಕರು ಕೊರೊನಾ ಪ್ರಕರಣಗಳು ಉಲ್ಬಣಿಸುತ್ತಿರುವ ಕಾರಣ ಪುನಃ ಚಿಂಚೋಳಿ ತಾಲ್ಲೂಕಿಗೆ ಮರಳುತ್ತಿದ್ದಾರೆ.</p>.<p>ಪ್ರಸಕ್ತ ವರ್ಷ ಅಂದಾಜು 9 ಸಾವಿರಕ್ಕೂ ಹೆಚ್ಚು ಮಂದಿ ಮುಂಬೈಗೆ ಹೋಗಿದ್ದರು. ಇದರಲ್ಲಿ 4,500 ಮಂದಿ ಈಗಾಗಲೇ ಮರಳಿದ್ದಾರೆ. ಕೆಲವರು ಮುಂಬೈಯಲ್ಲೇ ಕಾಯಂ ನೆಲೆ ಕಂಡುಕೊಂಡಿದ್ದು, ಇನ್ನೂ 4 ಸಾವಿರ ಮಂದಿ ಮರಳುವವರಿದ್ದಾರೆ. ಮಹಾರಾಷ್ಟ್ರದ ಗಡಿಯಲ್ಲಿ ಚೆಕ್ಪೋಸ್ಟ್ ತೆರೆದು ಮರಳುತ್ತಿರುವ ಕಾರ್ಮಿಕರ ತಪಾಸಣೆ ನಡೆಸುತ್ತಿದ್ದಾರೆ.</p>.<p>‘ತಾಲ್ಲೂಕಿಗೆ ವಾಪಸ್ಸಾದ ವಲಸೆ ಕಾರ್ಮಿಕರ ಬಗ್ಗೆ ನಿಖರ ಮಾಹಿತಿ ಇಲ್ಲ. ಆದರೆ, ವಲಸೆಯಿಂದ ಹಿಂದಿರುಗಿದ 600ಕ್ಕೂ ಹೆಚ್ಚು ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಜತೆಗೆ ಆಶಾ ಕಾರ್ಯಕರ್ತೆಯರಿಗೆ ಜಾಗ್ರತೆಯಿಂದ ಇರುವಂತೆ ಸೂಚಿಸಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಮಹಮ್ಮದ್ ಗಫಾರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಳೆದ ವರ್ಷ ಕ್ವಾರಂಟೈನ್ ಕೇಂದ್ರಗಳು ತೆರೆದಿದ್ದರಿಂದ ಗುಳೆಯಿಂದ ಮರಳಿದವರ ಮಾಹಿತಿ ಬೇಗ ಲಭಿಸುತ್ತಿತ್ತು. ಆದರೆ, ಈಗ ಮಾಹಿತಿ ಕಲೆ ಹಾಕುವುದು ಕಷ್ಟಸಾಧ್ಯ. ಕೊರೊನಾ ನಿಯಂತ್ರಣಕ್ಕೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಪುರಸಭೆಗೆ ಇಬ್ಬರು ಮತ್ತು 4 ಗ್ರಾಮ ಪಂಚಾಯಿತಿಗೆ ಒಬ್ಬರಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಇನ್ಸಿಡೆಂಟ್ ಕಮಾಂಡರ್ಗಳಾಗಿ ಜಿಲ್ಲಾಧಿಕಾರಿ ವಿವಿ ಜ್ಯೋತ್ಸ್ಯಾ ಅವರು ನೇಮಿಸಿದ್ದಾರೆ’ ಎಂದು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ತಿಳಿಸಿದರು.</p>.<p class="Briefhead">‘ಕಂಟೇನ್ಮೆಂಟ್ ವಲಯಕ್ಕೆ ಕ್ರಮ’</p>.<p>ಚಿಂಚೋಳಿ ತಾಲ್ಲೂಕಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. 100 ಮೀಟರ್ ಅಂತರದಲ್ಲಿ 5 ಜನರಲ್ಲಿ ಸೋಂಕು ದೃಢಪಟ್ಟಲ್ಲಿ, ಅಂತಹ ಸ್ಥಳಗಳನ್ನು ಕಂಟೇನ್ಮೆಂಟ್ ವಲಯವೆಂದು ಘೋಷಿಸಲಾಗುವುದು. ತಾಲ್ಲೂಕಿನ ಶಿವರೆಡ್ಡಿಪಳ್ಳಿ ಹಾಗೂ ಮರಪಳ್ಳಿ ಗ್ರಾಮದಲ್ಲಿ ಕಂಟೇನ್ಮೆಂಟ್ ವಲಯ ಘೋಷಿಸಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಹಮ್ಮದ್ ಗಫಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>