ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕಲಬುರಗಿ: ರಂಗಾಯಣಕ್ಕೆ ಅನುದಾನವೂ ಇಲ್ಲ, ಕಲಾವಿದರೂ ಇಲ್ಲ!

Published : 28 ಡಿಸೆಂಬರ್ 2024, 5:51 IST
Last Updated : 28 ಡಿಸೆಂಬರ್ 2024, 5:51 IST
ಫಾಲೋ ಮಾಡಿ
Comments
ಶಿವರಾಜ ತಂಗಡಗಿ
ಶಿವರಾಜ ತಂಗಡಗಿ
ರಾಜ್ಯದ ಎಲ್ಲ ರಂಗಾಯಣಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಸೂಚಿಸಲಾಗಿದ್ದು ಚಟುವಟಿಕೆ ಶುರು ಮಾಡುವಂತೆ ತಿಳಿಸಿದ್ದೇವೆ. ಸಾಂಸ್ಕೃತಿಕ ಚಟುವಟಿಕೆಗಳಿಗೆ ಹಣಕಾಸಿನ ಕೊರತೆ ಇಲ್ಲ
ಶಿವರಾಜ ತಂಗಡಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ
ಸುಜಾತಾ ಜಂಗಮಶೆಟ್ಟಿ
ಸುಜಾತಾ ಜಂಗಮಶೆಟ್ಟಿ
ರಂಗಾಯಣಕ್ಕೆ ಒಂದು ಕಂತಿನ ಅನುದಾನ ಬಿಡುಗಡೆಯಾದರೆ ಕಲಾವಿದರ ನೇಮಕ ಪ್ರಕ್ರಿಯೆ ಶುರು ಮಾಡಬಹುದು. ಅನುದಾನದ ನಿರೀಕ್ಷೆಯಲ್ಲಿದ್ದೇವೆ
ಸುಜಾತಾ ಜಂಗಮಶೆಟ್ಟಿ ನಿರ್ದೇಶಕಿ ಕಲಬುರಗಿ ರಂಗಾಯಣ
ಪ್ರಭಾಕರ ಜೋಶಿ
ಪ್ರಭಾಕರ ಜೋಶಿ
ನಾನು ನಿರ್ದೇಶಕನಾಗಿದ್ದ ಅವಧಿಯ ಕೊನೆಗೆ ಸರ್ಕಾರ ಕೇವಲ ₹ 20 ಲಕ್ಷ ಅನುದಾನ ನೀಡಿತ್ತು. ಇದು ಸರಿಯಲ್ಲ ಎಂದು ಸಚಿವರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದೆ. ಕಲಬುರಗಿ ರಂಗಾಯಣಕ್ಕೆ ಕೆಕೆಆರ್‌ಡಿಬಿ ವಾರ್ಷಿಕ ₹ 1 ಕೋಟಿ ನೀಡಬೇಕು
ಪ್ರಭಾಕರ ಜೋಶಿ ರಂಗಾಯಣ ನಿಕಟಪೂರ್ವ ನಿರ್ದೇಶಕ
ಕಲಾವಿದರಿಗೆ ಕಡಿಮೆ ಸಂಭಾವನೆ
ಕಲಾವಿದರಿಗೆ ರಂಗಾಯಣ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ನಿಗದಿಪಡಿಸಲಾಗಿದ್ದ ಸಂಭಾವನೆಯನ್ನು ಇತ್ತೀಚಿನವರೆಗೂ ನೀಡಲಾಗುತ್ತಿದ್ದು ಈ ದುಬಾರಿ ದಿನಗಳಲ್ಲಿ ಆ ಸಂಭಾವನೆ ಮನೆ ನಡೆಸಲೂ ಸಾಲುವುದಿಲ್ಲ ಎಂದು ರಂಗಕರ್ಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಮೂರು ವರ್ಷಗಳ ಅವಧಿಗೆ 12 ಕಲಾವಿದರನ್ನು ನೇಮಕ ಮಾಡಲಾಗುತ್ತಿದ್ದು ಮೊದಲ ವರ್ಷ ಮಾಸಿಕ ₹ 12 ಸಾವಿರ ಎರಡನೇ ವರ್ಷ ₹ 14 ಸಾವಿರ ಹಾಗೂ ಮೂರನೇ ವರ್ಷ ₹ 16 ಸಾವಿರ ನೀಡಲಾಗುತ್ತದೆ. ತಂತ್ರಜ್ಞರಿಗೆ ಸಂಚಿತ ಮೊತ್ತ ಮಾಸಿಕ ₹ 20 ಸಾವಿರ ನೀಡಲಾಗುತ್ತದೆ. ಈ ಬಾರಿ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ತರಬೇಕು. ಕಲಾವಿದರಿಗೆ ಈಗ ನೀಡುತ್ತಿರುವ ಸಂಭಾವನೆಯ ದುಪ್ಪಟ್ಟು ನಿಗದಿಪಡಿಸಬೇಕು ಎಂದು ಎನ್ನುತ್ತಾರೆ ಜನರಂಗ ಕಲಾ ಸಂಘಟನೆಯ ಮುಖ್ಯಸ್ಥ ಶಂಕ್ರಯ್ಯ ಘಂಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT