<p><strong>ವಾಡಿ (ಕಲಬುರಗಿ):</strong> ಚಿತ್ತಾಪುರ ತಾಲ್ಲೂಕಿನಲ್ಲಿ ಬುಧವಾರ ಬೆಳಿಗ್ಗೆಯಿಂದ ಗುಡುಗು ಮಿಂಚು ಸಮೇತ ಆರಂಭಗೊಂಡ ಮಳೆಯು ನಾನಾ ಅವಾಂತರ ಸೃಷ್ಟಿಸಿದೆ. </p><p>ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ದಲಿತರ ಬಡಾವಣೆಯಲ್ಲಿ ಬುಧವಾರ ಬೆಳಗಿನ ಜಾವ 4 ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು ಸ್ಥಳೀಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದ್ಯಾವಪ್ಪ ನಡಿಗೇರಿ ಅವರ ಮನೆ ಮೇಲೆಯೇ ವಿದ್ಯುತ್ ಕಂಬ ಬಿದ್ದಿದ್ದು ಅದೃಷ್ಟವಶಾತ ಯಾವುದೇ ಅವಘಡ ಸಂಭವಿಸಿಲ್ಲ. ಬಡಾವಣೆಯಲ್ಲಿ ವಿದ್ಯುತ್ ತಂತಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಸ್ಥಳೀಯರು ಮನೆಯಿಂದ ಹೊರಗೆ ಬರಲು ಹೆದರುವಂತಾಯಿತು.</p><p>ಕಂಬಗಳು ಶಿಥಿಲಗೊಂಡಿದ್ದು ಯಾವುದೇ ಕ್ಷಣದಲ್ಲೂ ಬಿದ್ದು ಅಪಘಾತ ಉಂಟಾಗುತ್ತದೆ. ಕೂಡಲೇ ದುರಸ್ತಿ ಮಾಡಿ ಎಂದು ಆರು ತಿಂಗಳಿಂದ ಹೇಳುತ್ತಾ ಬರುತ್ತಿದ್ದೇವೆ. ಆದರೆ, ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ (ಕಲಬುರಗಿ):</strong> ಚಿತ್ತಾಪುರ ತಾಲ್ಲೂಕಿನಲ್ಲಿ ಬುಧವಾರ ಬೆಳಿಗ್ಗೆಯಿಂದ ಗುಡುಗು ಮಿಂಚು ಸಮೇತ ಆರಂಭಗೊಂಡ ಮಳೆಯು ನಾನಾ ಅವಾಂತರ ಸೃಷ್ಟಿಸಿದೆ. </p><p>ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ದಲಿತರ ಬಡಾವಣೆಯಲ್ಲಿ ಬುಧವಾರ ಬೆಳಗಿನ ಜಾವ 4 ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು ಸ್ಥಳೀಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದ್ಯಾವಪ್ಪ ನಡಿಗೇರಿ ಅವರ ಮನೆ ಮೇಲೆಯೇ ವಿದ್ಯುತ್ ಕಂಬ ಬಿದ್ದಿದ್ದು ಅದೃಷ್ಟವಶಾತ ಯಾವುದೇ ಅವಘಡ ಸಂಭವಿಸಿಲ್ಲ. ಬಡಾವಣೆಯಲ್ಲಿ ವಿದ್ಯುತ್ ತಂತಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಸ್ಥಳೀಯರು ಮನೆಯಿಂದ ಹೊರಗೆ ಬರಲು ಹೆದರುವಂತಾಯಿತು.</p><p>ಕಂಬಗಳು ಶಿಥಿಲಗೊಂಡಿದ್ದು ಯಾವುದೇ ಕ್ಷಣದಲ್ಲೂ ಬಿದ್ದು ಅಪಘಾತ ಉಂಟಾಗುತ್ತದೆ. ಕೂಡಲೇ ದುರಸ್ತಿ ಮಾಡಿ ಎಂದು ಆರು ತಿಂಗಳಿಂದ ಹೇಳುತ್ತಾ ಬರುತ್ತಿದ್ದೇವೆ. ಆದರೆ, ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>