ಸಾಮಾಜಿಕ ಕಾರ್ಯಕರ್ತ ಬಸವರಾಜ ಕೊಣ್ಣೂರ ಮಾತನಾಡಿ, ‘ನಗರಗಳಲ್ಲಿ ಲಕ್ಷ ವೃಕ್ಷ ಅಭಿಯಾನವನ್ನು ಮಾಡುವ ಅಗತ್ಯವಿದ್ದು, ಪ್ರತಿಯೊಂದು ಅಂಗಡಿಗಳಲ್ಲಿಯೂ ಸಸಿಗಳನ್ನು ವಿತರಿಸುವ ವ್ಯವಸ್ಥೆ ಜಾರಿಗೆ ಬರಬೇಕು. ಸಾರ್ವಜನಿಕರು ತಮ್ಮ ಮನೆಗಳು ಹಾಗೂ ಬಡಾವಣೆಗಳಲ್ಲಿ ಸಸಿಗಳನ್ನು ನೆಡಬೇಕು. ಇದಕ್ಕಾಗಿ 21 ಸಾವಿರ ಸಸಿಗಳನ್ನು ತಯಾರಿಸುವ ಕೆಲಸ ನಡೆದಿದೆ’ ಎಂದರು.