ಅನ್ನ ಸಂತರ್ಪಣೆ: ಜಾತ್ರಾ ಮಹೋತ್ಸವ, ರಥೋತ್ಸವ ನಿಮಿತ್ತ ಮಹಾಲಕ್ಷ್ಮಿ ಜಾತ್ರಾ ಕಮಿಟಿ ಹಾಗೂ ಸದ್ಭಕ್ತ ಮಂಡಳಿ ವತಿಯಿಂದ ಭಕ್ತರಿಗೆ ಪ್ರಸಾದ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ಪಟ್ಟಣದ ವರ್ತಕರು, ಸಂಘ–ಸಂಸ್ಥೆಗಳ ಪ್ರತಿನಿಧಿಗಳು ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರಸಾದ ವ್ಯವಸ್ಥೆ ಕಲ್ಪಿಸಿದ್ದರು.ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಭಕ್ತರ ಬಂಟಿಗ್ಸ್ ಗಳು, ಬ್ಯಾನರ್ಗಳು ರಾರಾಜಿಸುತ್ತಿದ್ದವು.