ಅನುಮತಿ ಕೊರಿಕೆ: ಸರ್ಕಾರಿ ಜಮೀನನ್ನು ಯಾವುದೇ ಮಂಜೂರಾತಿ ಆದೇಶವಿಲ್ಲದೆ ಅಂದಿನ ಗ್ರಾಮ ಲೆಕ್ಕಾಧಿಕಾರಿ ಸುಭಾಷ್ ಪಾಟೀಲ್ ಅವರು ಅನಧಿಕೃತವಾಗಿ ಪಹಣಿಯಲ್ಲಿ ನಮೂದು ಮಾಡಿರುವುದು ಕಂಡು ಬಂದಿದೆ. ಅವರ ವಿರುದ್ಧ ಹಾಗೂ ಅನಧಿಕೃತವಾಗಿ ಪಹಣಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಂಡಿರುವ ಮಹಾದೇವಿ ನಾಗೀಂದ್ರ ಡಿಗ್ಗಿ ಅವರ ವಿರುದ್ಧ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ತಿದ್ದುಪಡಿ ಕಾಯ್ದೆ ಕಲಂ 192(ಎ), 192(ಬಿ), 192(ಡಿ) ಪ್ರಕಾರ ಹಾಗೂ ಭಾರತೀಯ ದಂಡ ಸಂಹಿತೆ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಹಾಗೂ ಜಮೀನನ್ನು ಕರ್ನಾಟಕ ಸರ್ಕಾರದ್ದು ಎಂದು ನಮೂದಿಸಲು ಆದೇಶ ನೀಡಬೇಕು ಎಂದು ತಹಶೀಲ್ದಾರ್ ಅವರು ವರದಿಯಲ್ಲಿ ಸೇಡಂ ಉಪ ವಿಭಾಗಾಧಿಕಾರಿಗೆ ಕೋರಿದ್ದಾರೆ.