ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಡಾ.ಉಮೇಶ ಜಾಧವ ಅವರು,‘ಸೂಕ್ತ ಜಾಗ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಏಮ್ಸ್ ಅನ್ನು ಧಾರವಾಡಕ್ಕೆ ಸ್ಥಳಾಂತರಿಸಿದೆ. ಹೀಗಾಗಿ, ಈಗಾಗಲೇ ನೀಡಲಾದ 75 ಎಕರೆ ಹಾಗೂ ಅಗತ್ಯವಿರುವ ಹಚ್ಚುವರಿ 125 ಎಕರೆ ಜಾಗ ನಮಗೆ ಲಭ್ಯವಿದೆ ಎಂಬುದನ್ನು ಕೇಂದ್ರಕ್ಕೆ ಮನವರಿಕೆ ಮಾಡಬೇಕಿದೆ. ಈ ಕಾರಣಕ್ಕಾಗಿಯೇ ರಾಜ್ಯ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರೊಂದಿಗೆ ಚರ್ಚಿಸಿ, ಜಾಗ ಮಂಜೂರಾತಿಗೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಮ್ಸ್ ಅನ್ನು ಕಲಬುರ್ಗಿಯಲ್ಲೇ ಉಳಿಸಿಕೊಳ್ಳಲು ಎಲ್ಲ ಪ್ರಯತ್ನ ನಡೆಸಿದ್ದೇನೆ’ ಎಂದರು.