<p><strong>ಕಲಬುರ್ಗಿ: </strong>ನಗರದಲ್ಲಿ ಬುಧವಾರ ಬೆಳಿಗ್ಗೆಯಿಂದ ಬಿರುಸಿನ ಮಳೆ ಸುರಿಯುತ್ತಿದ್ದು, ಇದೇ 17ರಂದು ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.</p>.<p>ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜಿಟಿ ಜಿಟಿ ಸುರಿದ ಮಳೆ ಸಂಜೆಯ ಬಳಿಕ ಬಿರುಸು ಪಡೆದುಕೊಂಡಿತು.</p>.<p>ಹೀಗಾಗಿ ಪ್ರಧಾನ ಕಾರ್ಯಕ್ರಮ ನಡೆಯುವ ಡಿಎಆರ್ ಮೈದಾನ ಜಲಾವೃತವಾಗಿದ್ದು, ಶಾಮಿಯಾನ ಹಾಕುವ ಕಾರ್ಯಕ್ಕೂ ಅಡ್ಡಿಯಾಗಿದೆ.</p>.<p>ಇದೇ 17ರಂದು ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಬರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳಿಗ್ಗೆ 9ಕ್ಕೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆದರೆ, ಭಾರಿ ಮಳೆಯಿಂದಾಗಿ ಮೈದಾನದಲ್ಲಿ ಸಭಿಕರಿಗೆ ಆಸನ ವ್ಯವಸ್ಥೆ ಕಲ್ಪಿಸುವುದು ಜಿಲ್ಲಾಡಳಿತಕ್ಕೆ ಸವಾಲಾಗಿದೆ.</p>.<p>ಉತ್ಸವದ ಅಂಗವಾಗಿ ನಗರದೆಲ್ಲೆಡೆ ಸ್ವಾಗತ ಕಮಾನುಗಳನ್ನು ಅಳವಡಿಸಲಾಗಿದೆ. ಆದರೆ, ಕಮಾನಿಗೆ ಅಳವಡಿಸಿದ ಬಟ್ಟೆಗಳೆಲ್ಲ ತೊಯ್ದು ತೊಪ್ಪೆಯಾಗಿವೆ.</p>.<p>ಮಂಗಳವಾರ ರಾತ್ರಿಯಿಡೀ ಸುರಿದ ಮಳೆ ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಬಿರುಸಿನಿಂದ ಸುರಿಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ನಗರದಲ್ಲಿ ಬುಧವಾರ ಬೆಳಿಗ್ಗೆಯಿಂದ ಬಿರುಸಿನ ಮಳೆ ಸುರಿಯುತ್ತಿದ್ದು, ಇದೇ 17ರಂದು ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.</p>.<p>ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜಿಟಿ ಜಿಟಿ ಸುರಿದ ಮಳೆ ಸಂಜೆಯ ಬಳಿಕ ಬಿರುಸು ಪಡೆದುಕೊಂಡಿತು.</p>.<p>ಹೀಗಾಗಿ ಪ್ರಧಾನ ಕಾರ್ಯಕ್ರಮ ನಡೆಯುವ ಡಿಎಆರ್ ಮೈದಾನ ಜಲಾವೃತವಾಗಿದ್ದು, ಶಾಮಿಯಾನ ಹಾಕುವ ಕಾರ್ಯಕ್ಕೂ ಅಡ್ಡಿಯಾಗಿದೆ.</p>.<p>ಇದೇ 17ರಂದು ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಬರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳಿಗ್ಗೆ 9ಕ್ಕೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆದರೆ, ಭಾರಿ ಮಳೆಯಿಂದಾಗಿ ಮೈದಾನದಲ್ಲಿ ಸಭಿಕರಿಗೆ ಆಸನ ವ್ಯವಸ್ಥೆ ಕಲ್ಪಿಸುವುದು ಜಿಲ್ಲಾಡಳಿತಕ್ಕೆ ಸವಾಲಾಗಿದೆ.</p>.<p>ಉತ್ಸವದ ಅಂಗವಾಗಿ ನಗರದೆಲ್ಲೆಡೆ ಸ್ವಾಗತ ಕಮಾನುಗಳನ್ನು ಅಳವಡಿಸಲಾಗಿದೆ. ಆದರೆ, ಕಮಾನಿಗೆ ಅಳವಡಿಸಿದ ಬಟ್ಟೆಗಳೆಲ್ಲ ತೊಯ್ದು ತೊಪ್ಪೆಯಾಗಿವೆ.</p>.<p>ಮಂಗಳವಾರ ರಾತ್ರಿಯಿಡೀ ಸುರಿದ ಮಳೆ ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಬಿರುಸಿನಿಂದ ಸುರಿಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>