ಕಲಬುರಗಿ: ನಗರದ ಸಾಯಿ ಮಂದಿರ ಬಳಿಯ ಅಪಾರ್ಟ್ಮೆಂಟ್ ಬಳಿ ವಕೀಲ ಈರಣ್ಣಗೌಡ ಪಾಟೀಲ (40) ಎಂಬುವವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಗುರುವಾರ ಕೊಲೆ ಮಾಡಲಾಗಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರ ಭೇಟಿ ನೀಡಿದ್ದಾರೆ.
ನ್ಯಾಯಾಲಯಕ್ಕೆ ಹೋಗಲೆಂದು ಈರಣ್ಣಗೌಡ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳು ಸಮಯ ಸಾಧಿಸಿ ಕಲ್ಲು ಎತ್ತಿ ಹಾಕಿದ್ದಾರೆ.