ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ದುರದೃಷ್ಟಕರ. ನನ್ನ ಮಗ ಚಿದಾನಂದ ಮುಂದಿನ ಫಾರ್ಚುನರ್ ಕಾರಿನಲ್ಲಿ ಇದ್ದರು. ಹಿಂದಿನ ಕಾರು ಡಿಕ್ಕಿ ಹೊಡೆದಿದೆ. ಎಫ್ಐಆರ್ ನಿಂದ ಚಿದಾನಂದನ ಹೆಸರು ಕೈಬಿಡಲಾಗಿದೆ ಎಂಬ ಆರೋಪ ಸರಿಯಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸತ್ಯ ಏನೆಂಬುದು ಗೊತ್ತಾಗಲಿದೆ.