‘ಅಂದು ಬೆಳಿಗ್ಗೆ 10.45ಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಪಕ್ಷದ ನಗರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ ಅಧ್ಯಕ್ಷತೆ ವಹಿಸುವರು. ರಾಜ್ಯ ಸಂಚಾಲಕ ಎಸ್.ಎಸ್.ಮಿಟ್ಟಲಕೋಡ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಮುಖಂಡರಾದ ಉಮೇಶ ಪಾಟೀಲ, ಮಹಾದೇವ ಬೆಳಮಗಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಮಧ್ಯಾಹ್ನ 2.45ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಪಕ್ಷದ ರಾಜ್ಯ ಸಹ ಸಂಚಾಲಕ ಯೋಗೇಂದ್ರ ಹೊಡಾಘಟ್ಟ, ದಕ್ಷಿಣ ಮಂಡಲದ ಅಧ್ಯಕ್ಷ ರಾಮಚಂದ್ರ ರೆಡ್ಡಿ, ಉತ್ತರ ಮಂಡಲದ ಅಧ್ಯಕ್ಷ ಅಶೋಕ ಮಾನಕರ ಹಾಗೂ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಪಾಲ್ಗೊಳ್ಳವರು’ ಎಂದು ಅವರು ಹೇಳಿದರು.