ಬಳಿಕ ಮಾತನಾಡಿದ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶರಣಕುಮಾರ ಮೋದಿ, 'ಸಮುದಾಯದ ಎಲ್ಲಾ ಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಪಕ್ಷಾತೀತವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ಯಾವುದೇ ಹೋರಾಟ, ಪ್ರತಿಭಟನೆ ಮಾಡಿ ಸರ್ಕಾರವನ್ನು ಒತ್ತಾಯಿಸುತ್ತಿಲ್ಲ. ನಾವೆಲ್ಲರೂ ಇಲ್ಲಿ ಪಕ್ಷಾತೀತವಾಗಿ ಸೇರಿದ್ದೇವೆ' ಎಂದು ಸಮಂಜಸ ನೀಡಿದರು.