<p><strong>ಜೇವರ್ಗಿ:</strong> ತಾಲ್ಲೂಕಿನ ಸೊನ್ನ ಗ್ರಾಮದ ಹೊರವಲಯದಲ್ಲಿರುವ ಯಲ್ಲಮ್ಮನ ಕೊಳ್ಳದ ಹತ್ತಿರ ಭಾನುವಾರ ಬೆಳಿಗ್ಗೆ ಸಾಕುನಾಯಿ ಮೇಲೆ ಚಿರತೆ ದಾಳಿ ಮಾಡಿದೆ.</p>.<p>ರೈತ ಶಿಲೇಮಾನ್ ಕಾಸಿಂಸಾಬ್ ಶೇಕ್ ಸಿಂದಗಿ ಅವರ ಜಮೀನಿನಲ್ಲಿ ಸಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ಮಾಡಿ ಕೊಂದಿದೆ ಎನ್ನಲಾಗಿದೆ. ಕಾಣೆಯಾದ ನಾಯಿ ಹುಡುಕುವ ಸಂದರ್ಭದಲ್ಲಿ ಯಲ್ಲಮ್ಮನ ಕೊಳ್ಳದ ಹತ್ತಿರ ಚಿರತೆ ಹೆಜ್ಜೆ ಗುರುತು, ರಕ್ತದ ಗುರುತು ಕಂಡು ಬಂದಿದೆ.</p>.<p>ಘಟನೆ ಬಗ್ಗೆ ಮಾಹಿತಿ ಪಡೆದ ಉಪವಲಯ ಅರಣ್ಯ ಅಧಿಕಾರಿ ಸಚಿನ್ ಬಿರಾದಾರ ಹಾಗೂ ಗಸ್ತು ಅರಣ್ಯ ಪಾಲಕ ಮಲ್ಲಿನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಕೂಡಲೇ ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260316-31-1301481290</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ:</strong> ತಾಲ್ಲೂಕಿನ ಸೊನ್ನ ಗ್ರಾಮದ ಹೊರವಲಯದಲ್ಲಿರುವ ಯಲ್ಲಮ್ಮನ ಕೊಳ್ಳದ ಹತ್ತಿರ ಭಾನುವಾರ ಬೆಳಿಗ್ಗೆ ಸಾಕುನಾಯಿ ಮೇಲೆ ಚಿರತೆ ದಾಳಿ ಮಾಡಿದೆ.</p>.<p>ರೈತ ಶಿಲೇಮಾನ್ ಕಾಸಿಂಸಾಬ್ ಶೇಕ್ ಸಿಂದಗಿ ಅವರ ಜಮೀನಿನಲ್ಲಿ ಸಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ಮಾಡಿ ಕೊಂದಿದೆ ಎನ್ನಲಾಗಿದೆ. ಕಾಣೆಯಾದ ನಾಯಿ ಹುಡುಕುವ ಸಂದರ್ಭದಲ್ಲಿ ಯಲ್ಲಮ್ಮನ ಕೊಳ್ಳದ ಹತ್ತಿರ ಚಿರತೆ ಹೆಜ್ಜೆ ಗುರುತು, ರಕ್ತದ ಗುರುತು ಕಂಡು ಬಂದಿದೆ.</p>.<p>ಘಟನೆ ಬಗ್ಗೆ ಮಾಹಿತಿ ಪಡೆದ ಉಪವಲಯ ಅರಣ್ಯ ಅಧಿಕಾರಿ ಸಚಿನ್ ಬಿರಾದಾರ ಹಾಗೂ ಗಸ್ತು ಅರಣ್ಯ ಪಾಲಕ ಮಲ್ಲಿನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಕೂಡಲೇ ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260316-31-1301481290</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>