<p><strong>ಜೇವರ್ಗಿ:</strong> ತಾಲ್ಲೂಕಿನ ರೇವನೂರ ಗ್ರಾಮದ ಹೊಲವೊಂದರಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಚಿರತೆಗಳು ಕಂಡುಬಂದಿದ್ದು, ಅದರಲ್ಲಿ ಒಂದು ಚಿರತೆ ಕುರಿಗಾಹಿ ಮೇಲೆ ದಾಳಿ ನಡೆಸಿದ ಪರಿಣಾಮ ಆತನಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ನಿಂಗಪ್ಪ ಮಾಳಪ್ಪ ಆಲೂರ (45) ಚಿರತೆ ದಾಳಿಗೊಳಗಾಗಿದ್ದು, ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಮಂಗಳವಾರ ಭೀಮು ಸಾಲೋಟಗಿ ಎಂಬುವವರು ತಮ್ಮ ಮೆಕ್ಕೆಜೋಳದ ಹೊಲದಲ್ಲಿ ಮಲಗಿದ್ದ ಸಂದರ್ಭದಲ್ಲಿ ನಾಯಿಗಳು ಬೊಗಳಲು ಪ್ರಾರಂಭಿಸಿವೆ. ತಕ್ಷಣ ಎದ್ದು ನೋಡಿದಾಗ ಎರಡು ಚಿರತೆಗಳು ಹೋಗುವುದನ್ನು ಗಮನಿಸಿ ಗ್ರಾಮಸ್ಥರಿಗೆ ಫೋನ್ ಕರೆ ಮಾಡಿ ತಿಳಿಸಿದ್ದಾರೆ.</p>.<p>50ಕ್ಕೂ ಹೆಚ್ಚು ಜನ ಬಡಿಗೆ ಹಿಡಿದು ಹೊಲಕ್ಕೆ ಕೂಗಾಡುತ್ತಾ ಬಂದಾಗ ಎರಡೂ ಚಿರತೆಗಳು ಓಡಲು ಪ್ರಾರಂಭಿಸಿವೆ. ಎದುರಿಗೆ ಬಂದ ಕುರಿಗಾಹಿ ನಿಂಗಪ್ಪ ಆಲೂರ ಅವರ ಸೊಂಟದ ಬಳಿ ಕಚ್ಚಿ ಗಾಯಗೊಳಿಸಿ ಓಡಿಹೋಗಿವೆ.</p>.<p>ವಿಷಯ ತಿಳಿದು ಘಟನಾ ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಸಂಜಯಕುಮಾರ ಚವ್ಹಾಣ, ಉಪವಲಯ ಅರಣ್ಯಾಧಿಕಾರಿ ಸಿದ್ದುಗೌಡ ಪಾಟೀಲ ಹಾಗೂ ಗಸ್ತು ಅರಣ್ಯ ಪಾಲಕ ಮಲ್ಲಿನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಚಿರತೆಗಳ ಸೆರೆಗಾಗಿ ಕ್ಯಾಮರಾ ಟ್ರ್ಯಾಪ್ ಹಾಗೂ ಬೋನು ಇರಿಸಲಾಗಿದೆ. ಚಿರತೆಗಳು ಕಂಡು ಬಂದ ಹಿನ್ನಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.</p>.<p>‘ಚಿರತೆಗಳ ಸೆರೆಗಾಗಿ ಬೋನು ಇರಿಸಲಾಗಿದ್ದು, ರೇವನೂರ, ಹರನೂರ, ಮಾವನೂರ, ಹಂಚಿನಾಳ, ಸೊನ್ನ ಗ್ರಾಮಗಳ ಜನರು ರಾತ್ರಿ ಒಬ್ಬರೇ ಓಡಾಡಬಾರದು. ರೈತರು ಜಮೀನುಗಳಿಗೆ ನೀರು ಹಾಯಿಸಲು ರಾತ್ರಿ ಸಮಯದಲ್ಲಿ ಹೋಗಬಾರದು’ ಎಂದು ವಲಯ ಅರಣ್ಯಾಧಿಕಾರಿ ಸಂಜಯಕುಮಾರ ಚವ್ಹಾಣ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ:</strong> ತಾಲ್ಲೂಕಿನ ರೇವನೂರ ಗ್ರಾಮದ ಹೊಲವೊಂದರಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಚಿರತೆಗಳು ಕಂಡುಬಂದಿದ್ದು, ಅದರಲ್ಲಿ ಒಂದು ಚಿರತೆ ಕುರಿಗಾಹಿ ಮೇಲೆ ದಾಳಿ ನಡೆಸಿದ ಪರಿಣಾಮ ಆತನಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ನಿಂಗಪ್ಪ ಮಾಳಪ್ಪ ಆಲೂರ (45) ಚಿರತೆ ದಾಳಿಗೊಳಗಾಗಿದ್ದು, ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಮಂಗಳವಾರ ಭೀಮು ಸಾಲೋಟಗಿ ಎಂಬುವವರು ತಮ್ಮ ಮೆಕ್ಕೆಜೋಳದ ಹೊಲದಲ್ಲಿ ಮಲಗಿದ್ದ ಸಂದರ್ಭದಲ್ಲಿ ನಾಯಿಗಳು ಬೊಗಳಲು ಪ್ರಾರಂಭಿಸಿವೆ. ತಕ್ಷಣ ಎದ್ದು ನೋಡಿದಾಗ ಎರಡು ಚಿರತೆಗಳು ಹೋಗುವುದನ್ನು ಗಮನಿಸಿ ಗ್ರಾಮಸ್ಥರಿಗೆ ಫೋನ್ ಕರೆ ಮಾಡಿ ತಿಳಿಸಿದ್ದಾರೆ.</p>.<p>50ಕ್ಕೂ ಹೆಚ್ಚು ಜನ ಬಡಿಗೆ ಹಿಡಿದು ಹೊಲಕ್ಕೆ ಕೂಗಾಡುತ್ತಾ ಬಂದಾಗ ಎರಡೂ ಚಿರತೆಗಳು ಓಡಲು ಪ್ರಾರಂಭಿಸಿವೆ. ಎದುರಿಗೆ ಬಂದ ಕುರಿಗಾಹಿ ನಿಂಗಪ್ಪ ಆಲೂರ ಅವರ ಸೊಂಟದ ಬಳಿ ಕಚ್ಚಿ ಗಾಯಗೊಳಿಸಿ ಓಡಿಹೋಗಿವೆ.</p>.<p>ವಿಷಯ ತಿಳಿದು ಘಟನಾ ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಸಂಜಯಕುಮಾರ ಚವ್ಹಾಣ, ಉಪವಲಯ ಅರಣ್ಯಾಧಿಕಾರಿ ಸಿದ್ದುಗೌಡ ಪಾಟೀಲ ಹಾಗೂ ಗಸ್ತು ಅರಣ್ಯ ಪಾಲಕ ಮಲ್ಲಿನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಚಿರತೆಗಳ ಸೆರೆಗಾಗಿ ಕ್ಯಾಮರಾ ಟ್ರ್ಯಾಪ್ ಹಾಗೂ ಬೋನು ಇರಿಸಲಾಗಿದೆ. ಚಿರತೆಗಳು ಕಂಡು ಬಂದ ಹಿನ್ನಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.</p>.<p>‘ಚಿರತೆಗಳ ಸೆರೆಗಾಗಿ ಬೋನು ಇರಿಸಲಾಗಿದ್ದು, ರೇವನೂರ, ಹರನೂರ, ಮಾವನೂರ, ಹಂಚಿನಾಳ, ಸೊನ್ನ ಗ್ರಾಮಗಳ ಜನರು ರಾತ್ರಿ ಒಬ್ಬರೇ ಓಡಾಡಬಾರದು. ರೈತರು ಜಮೀನುಗಳಿಗೆ ನೀರು ಹಾಯಿಸಲು ರಾತ್ರಿ ಸಮಯದಲ್ಲಿ ಹೋಗಬಾರದು’ ಎಂದು ವಲಯ ಅರಣ್ಯಾಧಿಕಾರಿ ಸಂಜಯಕುಮಾರ ಚವ್ಹಾಣ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>