ಎರಡು ವರ್ಷಗಳ ಹಿಂದೆ ಹತ್ತಿರದ ಮಿನಾಸಪುರ ಗ್ರಾಮದ ಕೆರೆಯ ಹತ್ತಿರ ಮೀನಿಗೆ ಆಹಾರ ನೀಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಘಟನೆಯ ನಂತರ ಈಗ ಚಂಡ್ರಿಕಿ ಹೊರವಲಯದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ತಾಲ್ಲೂಕಿನಲ್ಲಿ ಚಿರತೆ ಸಂಚಾರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ, ಎಚ್ಚರಿಕೆ ಸಂದೇಶಗಳು ಹರಿದಾಡುತ್ತಿವೆ.