<p><strong>ಕಲಬುರಗಿ</strong>: ‘ಕಲಾವಿದ ಬಸವರಾಜ ಜಾನೆ ಅವರನ್ನು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು’ ಎಂದು ಕಲಾವಿದ ದೌಲತರಾಯ ದೇಸಾಯಿ ಒತ್ತಾಯಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಲಬುರಗಿ ಕಲಾವಿದರ ತಾಣ. ಎಸ್.ಎಂ.ಪಂಡಿತ್, ಜೆ.ಎಸ್.ಖಂಡೇರಾವ ಹಾಗೂ ಡಾ. ವಿ.ಜಿ.ಅಂದಾನಿ ಅವರಂಥ ಕಲಾವಿದರನ್ನು ನೀಡಿದೆ. ಬಸವರಾಜ ಜಾನೆ ಅವರು ಕೂಡ ಉತ್ತಮ ಕಲಾವಿದರಾಗಿದ್ದಾರೆ. 2016 ರಲ್ಲಿ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಸಹ ಪಡೆದಿದ್ದಾರೆ’ ಎಂದರು.</p>.<p>ಕೃತ್ತಿಕ ಎಂಬ ಸಂಸ್ಥೆ ಕಟ್ಟಿ ಆರ್ಟ್ ಗ್ಯಾಲರಿ ನಿರ್ಮಿಸಿ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಯುವ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಅಕಾಡೆಮಿ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೂ ದಲಿತ ಸಮುದಾಯದ ಒಬ್ಬರು ಮಾತ್ರ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಈ ಅಕಾಡೆಮಿಗೆ ಬಹುತೇಕ ದಕ್ಷಿಣ ಹಾಗೂ ಕರಾವಳಿ ಕರ್ನಾಟಕದ ಕಲಾವಿದರೇ ಅಧ್ಯಕ್ಷರಾಗುತ್ತಿದ್ದಾರೆ. ಅವರು ಈ ಭಾಗದ ಕಲಾವಿದರ ಸಮಸ್ಯೆಗಳನ್ನು ಸಮರ್ಪಕವಾಗಿ ಪ್ರಸ್ತುತ ಪಡಿಸುತ್ತಿಲ್ಲ. ಆದ್ದರಿಂದ ಕಲ್ಯಾಣ ಕರ್ನಾಟಕ ಭಾಗದ ಕಲಾವಿದರು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಬಸವರಾಜ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಈ ಭಾಗಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಕಲಾವಿದರಾದ ಪಿ.ಪರಶುರಾಮ, ಸೂರ್ಯಕಾಂತ ನಂದೂರ, ಮಂಜುಳಾ ಜಾನೆ ಹಾಗೂ ರಾಜಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಕಲಾವಿದ ಬಸವರಾಜ ಜಾನೆ ಅವರನ್ನು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು’ ಎಂದು ಕಲಾವಿದ ದೌಲತರಾಯ ದೇಸಾಯಿ ಒತ್ತಾಯಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಲಬುರಗಿ ಕಲಾವಿದರ ತಾಣ. ಎಸ್.ಎಂ.ಪಂಡಿತ್, ಜೆ.ಎಸ್.ಖಂಡೇರಾವ ಹಾಗೂ ಡಾ. ವಿ.ಜಿ.ಅಂದಾನಿ ಅವರಂಥ ಕಲಾವಿದರನ್ನು ನೀಡಿದೆ. ಬಸವರಾಜ ಜಾನೆ ಅವರು ಕೂಡ ಉತ್ತಮ ಕಲಾವಿದರಾಗಿದ್ದಾರೆ. 2016 ರಲ್ಲಿ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಸಹ ಪಡೆದಿದ್ದಾರೆ’ ಎಂದರು.</p>.<p>ಕೃತ್ತಿಕ ಎಂಬ ಸಂಸ್ಥೆ ಕಟ್ಟಿ ಆರ್ಟ್ ಗ್ಯಾಲರಿ ನಿರ್ಮಿಸಿ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಯುವ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಅಕಾಡೆಮಿ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೂ ದಲಿತ ಸಮುದಾಯದ ಒಬ್ಬರು ಮಾತ್ರ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಈ ಅಕಾಡೆಮಿಗೆ ಬಹುತೇಕ ದಕ್ಷಿಣ ಹಾಗೂ ಕರಾವಳಿ ಕರ್ನಾಟಕದ ಕಲಾವಿದರೇ ಅಧ್ಯಕ್ಷರಾಗುತ್ತಿದ್ದಾರೆ. ಅವರು ಈ ಭಾಗದ ಕಲಾವಿದರ ಸಮಸ್ಯೆಗಳನ್ನು ಸಮರ್ಪಕವಾಗಿ ಪ್ರಸ್ತುತ ಪಡಿಸುತ್ತಿಲ್ಲ. ಆದ್ದರಿಂದ ಕಲ್ಯಾಣ ಕರ್ನಾಟಕ ಭಾಗದ ಕಲಾವಿದರು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಬಸವರಾಜ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಈ ಭಾಗಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಕಲಾವಿದರಾದ ಪಿ.ಪರಶುರಾಮ, ಸೂರ್ಯಕಾಂತ ನಂದೂರ, ಮಂಜುಳಾ ಜಾನೆ ಹಾಗೂ ರಾಜಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>