ಶಹಾಬಾದ್: ಭೋವಿ ಸಮುದಾಯಗಳನ್ನು ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿಯಿಂದ ಕೈಬಿಡಬಾರದು ಎಂದು ಆಗ್ರಹಿಸಿ ಭೋವಿ ವಡ್ಡರ್ ಸಮಾಜ ಸೇವಾ ಸಂಘ ಹಾಗೂ ಭೋವಿ ವಡ್ಡರ್ ಹಿತ ರಕ್ಷಣಾ ಸಮಿತಿಯ ಮುಖಂಡರು ಬುಧವಾರ ಪತ್ರ ಚಳುವಳಿಯ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.
ಭೋವಿ ವಡ್ಡರ್ ಸಮಾಜ ಸೇವಾ ಸಂಘದ ಅಧ್ಯಕ್ಷ ಭೀಮರಾವ ಸಾಳುಂಕೆ ಮಾತನಾಡಿ, ಭೋವಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಬೇಕೆಂದು ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕುತಂತ್ರ ಮಾಡುತ್ತಿವೆ. ಅವರ ಈ ಕ್ರಮ ಖಂಡನೀಯ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ನಮ್ಮ ಸಮುದಾಯವನ್ನು ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈ ಬಿಡಬಾರದು ಎಂದು ಹೇಳಿದರು.
ಸಂಘದ ಮುಖಂಡರಾದ ಅನೀಲ ಭೋರಗಾಂವಕರ್, ರಾಮು ಕುಸಾಳೆ, ದೇವದಾಸ ಜಾಧವ, ದೀಪಕ ಚೌಧರಿ, ಅಂಬಣ್ಣ ಕುನ್ನೂರಕರ್, ಸಿದ್ರಾಮ ಕುಸಾಳೆ, ಭೋವಿ ವಡ್ಡರ್ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷ ಕಳೊಳ್ಳೊ ಕುಸಾಳೆ, ರಾಜು ದಂಡಗುಲಕರ್,ಅಂಬಾದಾಸ ಗುರೂಜಿ, ತಿರುಪತಿ ಚೌಧರಿ ಇದ್ದರು.