ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜುಣಗಿ ತಾಂಡಾದಲ್ಲಿ ಪತ್ರ ಚಳವಳಿ

Last Updated 11 ಜೂನ್ 2020, 3:41 IST
ಅಕ್ಷರ ಗಾತ್ರ

ಅಫಜಲಪುರ: ತಾಲ್ಲೂಕಿನ ಅರ್ಜುಣಗಿ ತಾಂಡಾದಲ್ಲಿ ಬುಧವಾರ ಲಂಬಾಣಿ ಭೋವಿ (ವಡ್ಡರ ) ಇತರ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈ ಬಿಡುವಂತೆ ನಡೆಸಿರುವ ಹುನ್ನಾರದ ವಿರೋಧಿಸಿ ಬಂಜಾರ ಯುವ ಮೋರ್ಚಾದಿಂದ ಪತ್ರ ಚಳವಳಿ ನಡೆಸಲಾಯಿತು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ದತ್ತು ಚವ್ಹಾಣ ಹಾಗೂ ಯುವ ಮುಖಂಡ ರಮೇಶ ಜಾಧವ್ ಮಾತನಾಡಿ, ‘ಸರ್ಕಾರ ಲಂಬಾಣಿ, ಭೂವಿ, ವಡ್ಡರ ಇತರ ಜಾತಿಗಳನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡುವ ಹುನ್ನಾರ ನಡೆಸಿದೆ. ಇದು ಸರಿಯಲ್ಲ ಈ ಎಲ್ಲಾ ಸಮಾಜದಲ್ಲಿ ಸಾಕಷ್ಟು ಬಡವರಿದ್ದಾರೆ. ಅವರಿಗೆ ಇನ್ನೂ ಮೀಸಲಾತಿ ಅವಶ್ಯಕತೆ ಇದೆ ಎಂದರು.

ತಾಂಡಾದ ಹಿರಿಯ ಮುಖಂಡರು, ಬಂಜಾರಾ ಯುವ ಮೋರ್ಚಾ ಕಾರ್ಯಕರ್ತರು, ಮಕ್ಕಳು, ಮಹಿಳೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT