ಕಲಬುರಗಿ: ನಗರದ ಕನ್ನಡ ಭವನದಲ್ಲಿ ಮೇ 13ರಂದು ಬೆಳಿಗ್ಗೆ 11ಕ್ಕೆ ಕರ್ನಾಟಕ ರಾಜ್ಯ ಅರಿವು ಕೇಂದ್ರ, ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ನೌಕರರ ಸಂಘದ ವತಿಯಿಂದ ಗ್ರಂಥಾಲಯ ಮೇಲ್ವಿಚಾರಕರ ಜಿಲ್ಲಾ ಘಟಕದ ಸಭೆಯನ್ನು ಕರೆಯಲಾಗಿದೆ.
ಈ ವೇಳೆ ರಾಜ್ಯ ಘಟಕದ ಅಧ್ಯಕ್ಷ ಪಂಪನಗೌಡ ಪಾಟೀಲ, ರಾಜ್ಯ ಘಟಕದ ಪದಾಧಿಕಾರಿಗಳ ಅಭಿನಂದನಾ ಸಮಾರಂಭವನ್ನೂ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಮಂತ ಗೌಂಡಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ ತಿಳಿಸಿದ್ದಾರೆ.