ಅಫಜಲಪುರ ತಾಲ್ಲೂಕಿನ ರೇವೂರ್ ಗ್ರಾಮದ ಸಂತೋಷ ಅಣ್ಣಾರಾಯ ಪಾಟೀಲ ಶಿಕ್ಷೆಗೆ ಒಳಗಾದವ. ಪತ್ನಿ ಸವಿತಾ ಕೊಲೆಯಾದವರು. ಹಲವು ವರ್ಷಗಳಿಂದ ಈ ದಂಪತಿ ಹೀರಾಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹದ ಕಾರಣ ಈ ಹಿಂದೆ ಸಂತೋಷ ಪೊಲೀಸ್ ಠಾಣೆ ಮೆಟ್ಟಿಲು ಹತ್ತಬೇಕಾಯಿತು. ತನ್ನನ್ನು ಜೈಲಿಗೆ ಕಳುಹಿಸಲು ಹೊಂಚು ಹಾಕಿದ್ದಾಳೆ ಎಂಬ ಕೋಪದಿಂದ ಸಂತೋಷನು ಖಾರ ಕುಟ್ಟುವ ಹಾರೆಯಿಂದ ಪತ್ನಿಯ ತಲೆ, ಕಿವಿಗೆ ಹೊಡೆದಿದ್ದ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಾಜೀದ್ ಪಟೇಲ್ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.