‘ಅಮೃತ ಸರೋವರ ಈಗ ಕಲಬುರ್ಗಿಯ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾಗಿದೆ. ಹಚ್ಚ ಹಸಿರಿನಿಂದ ಕೂಡಿದ ಪರಿಸರ, ಬೃಹತ್ ಶಿವಲಿಂಗ, ದ್ವಾದಶ ಜ್ಯೋತಿರ್ಲಿಂಗಗಳ ಜತೆಗೆ ಲೇಜರ್ ಶೋ ಹಾಗೂ ಜಾನಕಿ ಜಲಧಾರೆಯ ಧ್ವನಿ–ಬೆಳಕಿನ ಕಾರ್ಯಕ್ರಮ ಈ ತಾಣದ ಮೆರಗನ್ನು ಇನ್ನಷ್ಟು ಹೆಚ್ಚಿಸಿವೆ. ಇಲ್ಲಿಯ ಪ್ರಶಾಂತ ವಾತಾವರಣ ಎಲ್ಲರನ್ನೂ ಸೆಳೆಯುತ್ತಿದೆ’ ಎಂದು ಬ್ರಹ್ಮಕುಮಾರಿ ಸಂಸ್ಥೆಯ ಸಮಾಜ ಸೇವಾ ವಿಭಾಗದ ರಾಷ್ಟ್ರೀಯ ಸಂಯೋಜಕರಾದ ರಾಜಯೋಗಿ ಬಿ.ಕೆ. ಪ್ರೇಮಣ್ಣ ಹೇಳಿದರು.