<p><strong>ಚಿಂಚೋಳಿ</strong>: ಪಟ್ಟಣದಲ್ಲಿ ಎರಡು ಮದ್ಯದಂಗಡಿಗಳ ಕೀಲಿ ಮುರಿದ ಕಳ್ಳರು ₹ 2.11 ಲಕ್ಷದಷ್ಟು ನಗದು ಕದ್ದು ಪರಾರಿಯಾಗಿದ್ದಾರೆ.</p>.<p>ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಆರ್. ಪಾಟೀಲ ಮತ್ತು ಚಿಂಚೋಳಿಯ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆ ಬಳಿಯ ನಾಗಯ್ಯ ಕೊಟ್ರಕಿ ಅವರಿಗೆ ಸೇರಿದ ಮದ್ಯದಂಗಡಿಯಲ್ಲಿ ನಸುಕಿನ ಜಾವ 1ರಿಂದ 2 ಗಂಟೆ ಸಮಯದಲ್ಲಿ ಕಳ್ಳತನ ನಡೆದಿದೆ.</p>.<p>ಶಟರ್ ಎತ್ತಿ ಒಳಗೆ ನುಗ್ಗಿದ ಕಳ್ಳರು ಬಸ್ ನಿಲ್ದಾಣದ ಪಕ್ಕದ ಅಂಗಡಿಯಿಂದ ₹ 1.30 ಲಕ್ಷ ಹಾಗೂ ಬ್ಯಾಂಕ್ ಬಳಿಯ ಅಂಗಡಿಯಿಂದ ₹ 81 ಸಾವಿರ ನಗದು ದೋಚಿದ್ದಾರೆ ಎಂದು ಅಂಗಡಿ ಮಾಲೀಕರು ಚಿಂಚೋಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.</p>.<p>‘ಅಂಗಡಿಯೊಂದರ ಶಟರ್ ಎತ್ತಲು ನಾಲ್ವರು ಕಳ್ಳರು ಹೋಗಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೊಂದು ಅಂಗಡಿಯ ಸಿಸಿಟಿವಿ ದೃಶ್ಯಾವಳಿ ದಾಖಲಾಗುವ ಸಾಧನವನ್ನೂ ಕಳ್ಳರು ಕದ್ದುಕೊಂಡು ಹೋಗಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<p>ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಕಪಿಲದೇವ ಹಾಗೂ ಪಿಎಸ್ಐ ಗಂಗಮ್ಮ ಜಿನಿಕೇರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ಪಟ್ಟಣದಲ್ಲಿ ಎರಡು ಮದ್ಯದಂಗಡಿಗಳ ಕೀಲಿ ಮುರಿದ ಕಳ್ಳರು ₹ 2.11 ಲಕ್ಷದಷ್ಟು ನಗದು ಕದ್ದು ಪರಾರಿಯಾಗಿದ್ದಾರೆ.</p>.<p>ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಆರ್. ಪಾಟೀಲ ಮತ್ತು ಚಿಂಚೋಳಿಯ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆ ಬಳಿಯ ನಾಗಯ್ಯ ಕೊಟ್ರಕಿ ಅವರಿಗೆ ಸೇರಿದ ಮದ್ಯದಂಗಡಿಯಲ್ಲಿ ನಸುಕಿನ ಜಾವ 1ರಿಂದ 2 ಗಂಟೆ ಸಮಯದಲ್ಲಿ ಕಳ್ಳತನ ನಡೆದಿದೆ.</p>.<p>ಶಟರ್ ಎತ್ತಿ ಒಳಗೆ ನುಗ್ಗಿದ ಕಳ್ಳರು ಬಸ್ ನಿಲ್ದಾಣದ ಪಕ್ಕದ ಅಂಗಡಿಯಿಂದ ₹ 1.30 ಲಕ್ಷ ಹಾಗೂ ಬ್ಯಾಂಕ್ ಬಳಿಯ ಅಂಗಡಿಯಿಂದ ₹ 81 ಸಾವಿರ ನಗದು ದೋಚಿದ್ದಾರೆ ಎಂದು ಅಂಗಡಿ ಮಾಲೀಕರು ಚಿಂಚೋಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.</p>.<p>‘ಅಂಗಡಿಯೊಂದರ ಶಟರ್ ಎತ್ತಲು ನಾಲ್ವರು ಕಳ್ಳರು ಹೋಗಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೊಂದು ಅಂಗಡಿಯ ಸಿಸಿಟಿವಿ ದೃಶ್ಯಾವಳಿ ದಾಖಲಾಗುವ ಸಾಧನವನ್ನೂ ಕಳ್ಳರು ಕದ್ದುಕೊಂಡು ಹೋಗಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<p>ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಕಪಿಲದೇವ ಹಾಗೂ ಪಿಎಸ್ಐ ಗಂಗಮ್ಮ ಜಿನಿಕೇರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>