‘ಫೆ.6ರಂದು ಸಚಿವ ಸಂಪುಟ ವಿಸ್ತರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ. ಕಲಬುರ್ಗಿ ಜಿಲ್ಲೆಗೆ ಪ್ರಾತಿನಿಧ್ಯ ನೀಡಬೇಕು. ಇಲ್ಲದಿದ್ದರೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್ಡಿಬಿ) ಅಧ್ಯಕ್ಷರ ಹೆಸರನ್ನಾದರೂ ಅಂತಿಮಗೊಳಿಸಬೇಕು ಎಂದು ಬಿಜೆಪಿ ಶಾಸಕರಾದ ರಾಜಕುಮಾರ ಪಾಟೀಲ ತೆಲ್ಕೂರ, ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ ಹಾಗೂ ಸುಭಾಷ್ ಗುತ್ತೇದಾರ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು. ಆದರೆ, ಸೂಕ್ತ ಸ್ಪಂದನೆ ದೊರೆಯದಿದ್ದುದಕ್ಕೆ ಮತ್ತಿಮೂಡ ಹಾಗೂ ಗುತ್ತೇದಾರ ಮಂಗಳವಾರ ನಗರಕ್ಕೆ ವಾಪಸಾದರು. ಆದರೆ, ದತ್ತಾತ್ರೇಯಪಾಟೀಲ ರೇವೂರ ಹಾಗೂ ರಾಜಕುಮಾರ ಪಾಟೀಲ ತೆಲ್ಕೂರ ಮಂಗಳವಾರ ಸಂಜೆಯವರೆಗೂ ಬೆಂಗಳೂರಿನಲ್ಲೇ ಇದ್ದರು’ ಎಂದು ಬಿಜೆಪಿ ಮೂಲಗಳ ಮಾಹಿತಿ.