ಕಲಬುರ್ಗಿ: ತಾಲ್ಲೂಕಿನ ಬಬಲಾದ ಗ್ರಾಮದ ರೈತ ಬಸವರಾಜ ಕೋರಿ ಅವರು ಕೊಳವೆಬಾವಿ ನೀರು ಬಳಸಿಕೊಂಡು ಎರಡು ಎಕರೆ ಜಮೀನಿನಲ್ಲಿ ಹೀರೆಕಾಯಿ ಬೆಳೆದಿದ್ದಾರೆ. ಒಂದು ಎಕರೆಯಲ್ಲಿ ಮೆಂತೆಸೊಪ್ಪು, ಕೊತ್ತಂಬರಿ ಹಾಗೂ ಬೆಂಡೆಕಾಯಿ ಬೆಳೆದಿದ್ದಾರೆ. ಸರಿಯಾದ ಸಮಯಕ್ಕೆ ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ದೊರಕದ ಕಾರಣ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದೆ. ಹೀರೆಕಾಯಿಗೆ ಹುಳುಗಳು ಬಿದ್ದಿವೆ. ಹೂವುಗಳು ಉದುರುತ್ತಿವೆ.