ನರನಾಳ್ ಗ್ರಾಮದ ರೈತ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಾಂತುರೆಡ್ಡಿ ನರನಾಳ್ ತಮ್ಮ ತೋಟದಲ್ಲಿ ಒಂದು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಕಲ್ಲಂಗಡಿಗೆ ಬೆಲೆ ಸಿಗದೆ ನಷ್ಟ ಅನುಭವಿಸಿದ್ದಾರೆ. ಕಲ್ಲಂಗಡಿ ಬೆಳೆದು ಬಂಪರ್ ಆದಾಯ ಗಳಿಸಿದ ರೈತರ ಯಶೋಗಾಥೆಯಿಂದ ಪ್ರೇರಣೆ ಪಡೆದು ಮೊದಲ ಬಾರಿಗೆ ಕಲ್ಲಂಗಡಿ ಬೆಳೆದಿರುವ ಶಾಂತುರೆಡ್ಡಿ ನರನಾಳ್ ನಷ್ಟಕ್ಕೆ ಗುರಿಯಾಗಿದ್ದಾರೆ.