<p><strong>ಕಾಳಗಿ</strong>: ತಾಲ್ಲೂಕಿನ ಹಲಚೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾವದಗಿ ಗ್ರಾಮದ ಹೊಲವೊಂದರಲ್ಲಿ ಜೋಪಡಿ ಹಾಕಿಕೊಂಡು 6 ತಿಂಗಳಿಂದ ವಾಸವಿರುವ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ 10 ಬಡ ಕುಟುಂಬಗಳು ಕೊರೊನಾ ಹಿನ್ನೆಲೆಯ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಜಾಲಿ ಮುಳ್ಳಿನ ಗಿಡಗಳನ್ನು ಕಡಿದು ಇದ್ದಲು ಮಾಡಿ ಮಾರಾಟ ಮಾಡುತ್ತ ಜೀವನ ಸಾಗಿಸುತ್ತಿದ್ದ ಇವರಿಗೆ ಮಹಾಮಾರಿ ಕೊರೊನಾ ಲಾಕ್ ಡೌನ್ನಿಂದಾಗಿ ಕೆಲಸ ನಿಂತುಹೋಗಿ ಊಟಕ್ಕೂ ಗತಿ ಇಲ್ಲದಂತಾಗಿದೆ.</p>.<p>ಮಹಿಳೆಯರು, ಮಕ್ಕಳು ಈ ಕುಟುಂಬಗಳು ಯಾವುದೇ ರೀತಿಯ ಆರ್ಥಿಕ ನೆರವು, ಅನ್ನ, ಆಸರೆಯ ಸಹಾಯವಿಲ್ಲದೆ ನರಳಾಟದ ಬದುಕು ನಡೆಸುತ್ತಿದ್ದಾರೆ. ಇನ್ನೇನು ಲಾಕ್ ಡೌನ್ ಮುಗಿದಿದೆ, ಕೆಲಸ ಮಾಡಿ ಹಸಿವಿನ ಚೀಲ ತುಂಬಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಪಕ್ಕದ ಕೋಡ್ಲಿ ಗ್ರಾಮದಲ್ಲಿ ಮೇ 4ರಂದು ಕೋವಿಡ್ ಸೋಂಕು ದೃಢಪಟ್ಟು ಈ ಪ್ರದೇಶ ಮತ್ತಷ್ಟು ಬಿಗಿಗೊಂಡಿದೆ.</p>.<p>ತೀವ್ರ ತೊಂದರೆಗೆ ಸಿಲುಕಿರುವ ಇವರು ಈಗ ಸಹಾಯಕ್ಕೆ ಅಂಗಲಾಚುತ್ತಿದ್ದಾರೆ. ಈ ಕುರಿತು ತಾಲ್ಲೂಕಿನ ತಹಶೀಲ್ದಾರ್ ನೀಲಪ್ರಭಾ ಬಬಲಾದ ಗಮನಕ್ಕೆ ತರಲಾಗಿದ್ದರೂ ಅವರು ಸಹಾಯಕ್ಕೆ ಬಾರದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಭಾರತ ಮುಕ್ತಿ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಾರುತಿ ಗಂಜಗಿರಿ, ಮುಖಂಡ ಸಂತೋಷ ಮಾಳಗಿ ದೂರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆಗೆ ತಹಶೀಲ್ದಾರರು ಮೊಬೈಲ್ ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ</strong>: ತಾಲ್ಲೂಕಿನ ಹಲಚೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾವದಗಿ ಗ್ರಾಮದ ಹೊಲವೊಂದರಲ್ಲಿ ಜೋಪಡಿ ಹಾಕಿಕೊಂಡು 6 ತಿಂಗಳಿಂದ ವಾಸವಿರುವ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ 10 ಬಡ ಕುಟುಂಬಗಳು ಕೊರೊನಾ ಹಿನ್ನೆಲೆಯ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಜಾಲಿ ಮುಳ್ಳಿನ ಗಿಡಗಳನ್ನು ಕಡಿದು ಇದ್ದಲು ಮಾಡಿ ಮಾರಾಟ ಮಾಡುತ್ತ ಜೀವನ ಸಾಗಿಸುತ್ತಿದ್ದ ಇವರಿಗೆ ಮಹಾಮಾರಿ ಕೊರೊನಾ ಲಾಕ್ ಡೌನ್ನಿಂದಾಗಿ ಕೆಲಸ ನಿಂತುಹೋಗಿ ಊಟಕ್ಕೂ ಗತಿ ಇಲ್ಲದಂತಾಗಿದೆ.</p>.<p>ಮಹಿಳೆಯರು, ಮಕ್ಕಳು ಈ ಕುಟುಂಬಗಳು ಯಾವುದೇ ರೀತಿಯ ಆರ್ಥಿಕ ನೆರವು, ಅನ್ನ, ಆಸರೆಯ ಸಹಾಯವಿಲ್ಲದೆ ನರಳಾಟದ ಬದುಕು ನಡೆಸುತ್ತಿದ್ದಾರೆ. ಇನ್ನೇನು ಲಾಕ್ ಡೌನ್ ಮುಗಿದಿದೆ, ಕೆಲಸ ಮಾಡಿ ಹಸಿವಿನ ಚೀಲ ತುಂಬಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಪಕ್ಕದ ಕೋಡ್ಲಿ ಗ್ರಾಮದಲ್ಲಿ ಮೇ 4ರಂದು ಕೋವಿಡ್ ಸೋಂಕು ದೃಢಪಟ್ಟು ಈ ಪ್ರದೇಶ ಮತ್ತಷ್ಟು ಬಿಗಿಗೊಂಡಿದೆ.</p>.<p>ತೀವ್ರ ತೊಂದರೆಗೆ ಸಿಲುಕಿರುವ ಇವರು ಈಗ ಸಹಾಯಕ್ಕೆ ಅಂಗಲಾಚುತ್ತಿದ್ದಾರೆ. ಈ ಕುರಿತು ತಾಲ್ಲೂಕಿನ ತಹಶೀಲ್ದಾರ್ ನೀಲಪ್ರಭಾ ಬಬಲಾದ ಗಮನಕ್ಕೆ ತರಲಾಗಿದ್ದರೂ ಅವರು ಸಹಾಯಕ್ಕೆ ಬಾರದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಭಾರತ ಮುಕ್ತಿ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಾರುತಿ ಗಂಜಗಿರಿ, ಮುಖಂಡ ಸಂತೋಷ ಮಾಳಗಿ ದೂರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆಗೆ ತಹಶೀಲ್ದಾರರು ಮೊಬೈಲ್ ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>