ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಕಳೆದ ಚುನಾವಣೆಯ ಸೋಲಿನ ಸೇಡು ತೀರಿಸಿಕೊಳ್ಳಿ: ಮಲ್ಲಿಕಾರ್ಜುನ ಖರ್ಗೆ

Published : 13 ಏಪ್ರಿಲ್ 2024, 7:04 IST
Last Updated : 13 ಏಪ್ರಿಲ್ 2024, 7:04 IST
ಫಾಲೋ ಮಾಡಿ
Comments
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಸ್ತೋಮ
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಸ್ತೋಮ
ನಾವು ಎಷ್ಟು ಕೆಲಸ ಮಾಡಿದರೂ ಅದು ಮತದಾರರ ಮನಸ್ಸಿನಲ್ಲಿ ಹೋಗುವುದಿಲ್ಲ. ಮತಗಟ್ಟೆಗೆ ಹೋಗುತ್ತಿದ್ದಂತೆಯೇ ಜನರಿಗೆ ಏನಾಗುತ್ತದೋ ಏನೋ. ಈ ಬಾರಿ ಹಾಗಾಗಬಾರದು
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ
ಈಗಾಗಲೇ ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿದ್ದಾರೆ. ಲೋಕಸಭೆಗೆ ನಾನು ಆಯ್ಕೆಯಾದರೆ ಕಲಬುರಗಿ ಜಿಲ್ಲೆಗೆ ಹೆಚ್ಚು ಅಭಿವೃದ್ಧಿ ಯೋಜನೆಗಳನ್ನು ತರಬಹುದು
ರಾಧಾಕೃಷ್ಣ ದೊಡ್ಡಮನಿ ಕಾಂಗ್ರೆಸ್ ಅಭ್ಯರ್ಥಿ
ಅಧಿಕಾರಕ್ಕೆ ಬಂದರೆ 25 ಗ್ಯಾರಂಟಿ
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಪ್ರಮುಖ ಗ್ಯಾರಂಟಿ ಸೇರಿದಂತೆ ಒಟ್ಟು 25 ಗ್ಯಾರಂಟಿಗಳನ್ನು ಈಡೇರಿಸಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದರು. ಒಂದು ವರ್ಷಕ್ಕೆ ಮಹಿಳೆಯರಿಗೆ ₹ 1 ಲಕ್ಷ ರೂಪಾಯಿ ನೀಡಲಾಗುವುದು. ಯುವಕರಿಗೆ ಒಂದು ಲಕ್ಷ ವೆಚ್ಚದಲ್ಲಿ ವೃತ್ತಿಪರ ತರಬೇತಿ ಕೊಡಿಸಲಾಗುವುದು. ರೈತರ ಸಾಲ ಮನ್ನಾ ಮಾಡಲಾಗುವುದು. ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸಲಾಗುವುದು. ಈಗಾಗಲೇ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಜಾರಿಗೊಳಿಸಲಾಗಿದೆ. ಹೀಗಾಗಿ ಇಂಡಿಯಾ ಮೈತ್ರಿಕೂಟಕ್ಕೆ ಹೆಚ್ಚು ಸೀಟು ಗೆಲ್ಲಿಸಿದರೆ ಎಲ್ಲ ಗ್ಯಾರಂಟಿಗಳು ಈಡೇರಲಿವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT