ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ಆರಂಭವಾಗಿದೆ. ಪಕ್ಷಗಳು ಹಾಗೂ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವಿಗಾಗಿ ಕಸರತ್ತು ಆರಂಭಿಸಿದ್ದಾರೆ. ಗೃಹ ಬಳಕೆ ಸಾಮಾನು ಹಾಗೂ ಹಣದ ಮೂಲಕ ಮತದಾರನನ್ನು ಸೆಳೆಯಲು ಪೈಪೋಟಿ ಆರಂಭವಾಗಿದೆ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಚೆಕ್ಪೋಸ್ಟ್ ನಿರ್ಮಿಸಿದ್ದಾರೆ. ಬೈಕ್, ಆಟೋ, ಲಾರಿ, ಬಸ್, ಕಾರು ಸೇರಿದಂತೆ ಎಲ್ಲ ವಾಹನಗಳ ಪರಿಶೀಲನೆ ಮಾಡುತ್ತಿದ್ದಾರೆ.