<p><strong>ಕಲಬುರಗಿ</strong>: ನಗರದ ವಿವಿಧ ಇಲಾಖೆಗಳ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳವಾರವೂ ದಿಢೀರ್ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.</p>.ಕಮಲಾಪುರ: ಕಿರಾಣಿ ಅಂಗಡಿ, ಎರಡು ಚಿನ್ನಾಭರಣ ಮಳಿಗೆಯಲ್ಲಿ ಕಳವು.<p>ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ಜಂಟಿ ನಿರ್ದೇಶಕರ ಕಚೇರಿ ಹಾಗೂ ಕಲಬುರಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.</p><p>ಸಮಾಜ ಕಲ್ಯಾಣ ಇಲಾಖೆ ಮಾತ್ರವಲ್ಲದೇ ಕೃಷಿ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಹಾಗೂ ಸಾರಿಗೆ ಇಲಾಖೆಯ ಕಚೇರಿಗಳಿಗೆ ಲೋಕಾಯುಕ್ತ ಬೆಂಗಳೂರಿನ ಅಧಿಕಾರಿಗಳ ವಿವಿಧ ತಂಡಗಳು ದಿಢೀರ್ ಭೇಟಿ ಕೊಟ್ಟು ದಾಖಲೆ ಪತ್ರಗಳು, ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿದರು.</p><p>ಕಲಬುರಗಿಯಲ್ಲದೇ ಚಿಂಚೋಳಿ, ಕಾಳಗಿ ತಾಲ್ಲೂಕಿನಲ್ಲೂ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಿಢೀರ್ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.</p>.ಕಲಬುರಗಿ | ಹೋರಾಟಗಾರರ ಬಿಡುಗಡೆಗೆ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಗರದ ವಿವಿಧ ಇಲಾಖೆಗಳ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳವಾರವೂ ದಿಢೀರ್ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.</p>.ಕಮಲಾಪುರ: ಕಿರಾಣಿ ಅಂಗಡಿ, ಎರಡು ಚಿನ್ನಾಭರಣ ಮಳಿಗೆಯಲ್ಲಿ ಕಳವು.<p>ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ಜಂಟಿ ನಿರ್ದೇಶಕರ ಕಚೇರಿ ಹಾಗೂ ಕಲಬುರಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.</p><p>ಸಮಾಜ ಕಲ್ಯಾಣ ಇಲಾಖೆ ಮಾತ್ರವಲ್ಲದೇ ಕೃಷಿ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಹಾಗೂ ಸಾರಿಗೆ ಇಲಾಖೆಯ ಕಚೇರಿಗಳಿಗೆ ಲೋಕಾಯುಕ್ತ ಬೆಂಗಳೂರಿನ ಅಧಿಕಾರಿಗಳ ವಿವಿಧ ತಂಡಗಳು ದಿಢೀರ್ ಭೇಟಿ ಕೊಟ್ಟು ದಾಖಲೆ ಪತ್ರಗಳು, ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿದರು.</p><p>ಕಲಬುರಗಿಯಲ್ಲದೇ ಚಿಂಚೋಳಿ, ಕಾಳಗಿ ತಾಲ್ಲೂಕಿನಲ್ಲೂ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಿಢೀರ್ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.</p>.ಕಲಬುರಗಿ | ಹೋರಾಟಗಾರರ ಬಿಡುಗಡೆಗೆ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>