<p><strong>ಕಲಬುರಗಿ:</strong> ನಿವೃತ್ತ ಶಿಕ್ಷಕಿಯೊಬ್ಬರ ಪಿಂಚಣಿ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಕುರಿತ ಕಡತವನ್ನು ಮುಂದೆ ಕಳುಹಿಸಲು ₹28,500 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸೇಡಂ ಬಿಇಒ ಕಚೇರಿಯ ಎಫ್ಡಿಸಿ ಶಿವಲಿಂಗಪ್ಪ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>ರಜಾಕ್ ಬೇಗಂ ಅವರು ಸೇಡಂ ತಾಲ್ಲೂಕಿನ ಲಿಂಗಂಪಲ್ಲಿಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿ ಒಂದು ವರ್ಷದ ಹಿಂದೆಯೇ ನಿವೃತ್ತರಾಗಿದ್ದರು. ಅವರ ಪಿಂಚಣಿ ಹಣ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಲೆಕ್ಕಹಾಕಿ ಕಡತ ಕಳುಹಿಸಲು ಶಿವಲಿಂಗಪ್ಪ ₹28,500 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಲ್ಲಿ ಯುಪಿಐ ಮೂಲಕ ಮುಂಗಡವಾಗಿ ₹15 ಸಾವಿರ ಪಡೆದಿದ್ದರು. </p><p>ಈ ಸಂಬಂಧ ರಜಾಕ್ಬೇಗಂ ಅವರ ಪುತ್ರ ಅಫ್ರಿದಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶಿವಲಿಂಗಪ್ಪ ಗುರುವಾರ ₹10 ಸಾವಿರ ಹಣವನ್ನು ಯುಪಿಐ ಮೂಲಕ ಪಡೆದಾಗ ಕಲಬುರಗಿಯ ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಇನ್ಸ್ಪೆಕ್ಟರ್ ಅರುಣಕುಮಾರ ಮುರಗುಂಡಿ ಅವರ ತಂಡವು ಆರೋಪಿಯನ್ನು ಬಂಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಿವೃತ್ತ ಶಿಕ್ಷಕಿಯೊಬ್ಬರ ಪಿಂಚಣಿ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಕುರಿತ ಕಡತವನ್ನು ಮುಂದೆ ಕಳುಹಿಸಲು ₹28,500 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸೇಡಂ ಬಿಇಒ ಕಚೇರಿಯ ಎಫ್ಡಿಸಿ ಶಿವಲಿಂಗಪ್ಪ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>ರಜಾಕ್ ಬೇಗಂ ಅವರು ಸೇಡಂ ತಾಲ್ಲೂಕಿನ ಲಿಂಗಂಪಲ್ಲಿಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿ ಒಂದು ವರ್ಷದ ಹಿಂದೆಯೇ ನಿವೃತ್ತರಾಗಿದ್ದರು. ಅವರ ಪಿಂಚಣಿ ಹಣ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಲೆಕ್ಕಹಾಕಿ ಕಡತ ಕಳುಹಿಸಲು ಶಿವಲಿಂಗಪ್ಪ ₹28,500 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಲ್ಲಿ ಯುಪಿಐ ಮೂಲಕ ಮುಂಗಡವಾಗಿ ₹15 ಸಾವಿರ ಪಡೆದಿದ್ದರು. </p><p>ಈ ಸಂಬಂಧ ರಜಾಕ್ಬೇಗಂ ಅವರ ಪುತ್ರ ಅಫ್ರಿದಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶಿವಲಿಂಗಪ್ಪ ಗುರುವಾರ ₹10 ಸಾವಿರ ಹಣವನ್ನು ಯುಪಿಐ ಮೂಲಕ ಪಡೆದಾಗ ಕಲಬುರಗಿಯ ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಇನ್ಸ್ಪೆಕ್ಟರ್ ಅರುಣಕುಮಾರ ಮುರಗುಂಡಿ ಅವರ ತಂಡವು ಆರೋಪಿಯನ್ನು ಬಂಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>