<p><strong>ಕಲಬುರಗಿ:</strong> ಕಕ್ಷಿದಾರರೊಬ್ಬರ ಪರವಾಗಿ ಉತ್ತಮವಾಗಿ ವಾದ ಮಂಡಿಸಲು ₹ 50 ಸಾವಿರಕ್ಕೆ ಬೇಡಿಕೆ ಇಟ್ಟು, ₹ 25 ಸಾವಿರ ಲಂಚ ಪಡೆಯುತ್ತಿದ್ದ ನಗರದ ಎರಡನೇ ಪಿಡಿಜೆ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ರಾಜಮಹೇಂದ್ರ ಜಿ. ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.</p>.<p>ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಕಂದನುಲಿ ಗ್ರಾಮದ ಕಕ್ಷಿದಾರ ನವೀನ್ ಅನಂತಯ್ಯ ಎಂಬುವವರು ದಾಖಲಿಸಿದ್ದ ಜಾತಿನಿಂದನೆ ಪ್ರಕರಣವನ್ನು ರಾಜಮಹೇಂದ್ರ ಅವರು ನಿರ್ವಹಿಸುತ್ತಿದ್ದರು. ಪ್ರಕರಣದಲ್ಲಿ ಉತ್ತಮವಾಗಿ ವಾದ ಮಾಡಲು ಆರೋಪಿ ರಾಜಮಹೇಂದ್ರ ನವೀನ್ಗೆ ₹ 50 ಸಾವಿರ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈಗಾಗಲೇ ₹ 20 ಸಾವಿರ ಹಣವನ್ನೂ ಪಡೆದಿದ್ದರು. ಉಳಿದ ಹಣಕ್ಕೆ ಬೇಡಿಕೆ ಇಟ್ಟಾಗ ಬೇಸತ್ತ ನವೀನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಡಿವೈಎಸ್ಪಿ ಶೀಲವಂತ ಅವರು ₹ 25 ಸಾವಿರ ನಗದು ಪಡೆಯುವಾಗ ದಾಳಿ ನಡೆಸಿ ವಶಕ್ಕೆ ಪಡೆದರು.</p>.<p>ಆರೋಪಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಕಕ್ಷಿದಾರರೊಬ್ಬರ ಪರವಾಗಿ ಉತ್ತಮವಾಗಿ ವಾದ ಮಂಡಿಸಲು ₹ 50 ಸಾವಿರಕ್ಕೆ ಬೇಡಿಕೆ ಇಟ್ಟು, ₹ 25 ಸಾವಿರ ಲಂಚ ಪಡೆಯುತ್ತಿದ್ದ ನಗರದ ಎರಡನೇ ಪಿಡಿಜೆ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ರಾಜಮಹೇಂದ್ರ ಜಿ. ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.</p>.<p>ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಕಂದನುಲಿ ಗ್ರಾಮದ ಕಕ್ಷಿದಾರ ನವೀನ್ ಅನಂತಯ್ಯ ಎಂಬುವವರು ದಾಖಲಿಸಿದ್ದ ಜಾತಿನಿಂದನೆ ಪ್ರಕರಣವನ್ನು ರಾಜಮಹೇಂದ್ರ ಅವರು ನಿರ್ವಹಿಸುತ್ತಿದ್ದರು. ಪ್ರಕರಣದಲ್ಲಿ ಉತ್ತಮವಾಗಿ ವಾದ ಮಾಡಲು ಆರೋಪಿ ರಾಜಮಹೇಂದ್ರ ನವೀನ್ಗೆ ₹ 50 ಸಾವಿರ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈಗಾಗಲೇ ₹ 20 ಸಾವಿರ ಹಣವನ್ನೂ ಪಡೆದಿದ್ದರು. ಉಳಿದ ಹಣಕ್ಕೆ ಬೇಡಿಕೆ ಇಟ್ಟಾಗ ಬೇಸತ್ತ ನವೀನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಡಿವೈಎಸ್ಪಿ ಶೀಲವಂತ ಅವರು ₹ 25 ಸಾವಿರ ನಗದು ಪಡೆಯುವಾಗ ದಾಳಿ ನಡೆಸಿ ವಶಕ್ಕೆ ಪಡೆದರು.</p>.<p>ಆರೋಪಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>