ಸದರಿ ರೈಲ್ವೆ ಯೋಜನೆಗೆ ಜಿಲ್ಲೆಯ ಜೇವರ್ಗಿ ಮತ್ತು ಚಿತ್ತಾಪುರ ತಾಲ್ಲೂಕಿನಲ್ಲಿ ಒಟ್ಟಾರೆ 296 ಎಕರೆ ಪ್ರದೇಶ ಭೂಸ್ವಾಧೀನಕ್ಕೆ ಗುರುತಿಸಿ, ಇದೂವರೆಗೆ 284 ಎಕರೆ ಪ್ರದೇಶ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಸಂಬಂಧಿಸಿದ ರೈತರಿಗೆ ಹಣ ಪಾವತಿ ಮಾಡಲಾಗಿದೆ ಎಂದು ಕೆ.ಐ.ಎ.ಡಿ.ಬಿ. ಭೂಸ್ವಾಧೀನಾಧಿಕಾರಿ ಶರಣಪ್ಪ ಬಿ. ಮಾಹಿತಿ ನೀಡಿದರು.