ಚಿತ್ರನಟ ದಿಲೀಪ ಮಳಬಾ ನಟನೆಯ ‘ಪ್ರೀತಿಗೋಸ್ಕರ ಪ್ರಾಣ ಬಿಡಬೇಡಿ’ ಕಿರುಚಿತ್ರವನ್ನು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಬಿಡುಗಡೆಗೊಳಿಸುವರು. ಅಧ್ಯಕ್ಷತೆಯನ್ನು ಬಸವರಾಜ ಮತ್ತಿಮೂಡ ವಹಿಸುವರು. ಶಾಸಕರಾದ ಡಾ. ಅಜಯ್ ಸಿಂಗ್, ರಮೇಶ ಭೂಸನೂರ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.