ಕಲಬುರ್ಗಿ:ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್ 2ರಂದು ನಗರಕ್ಕೆ ಆಗಮಿಸುತ್ತಿದ್ದಾರೆ. ಈ ಸಂದರ್ಭ ನಡೆಯಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಸೆ. 25ರಂದು ಸಂಜೆ 4ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ ತಿಳಿಸಿದ್ದಾರೆ.