<p><strong>ಚಿಂಚೋಳಿ</strong>: ನೆರೆಯ ತೆಲಂಗಾಣಕ್ಕೆ ಹೊಂದಿಕೊಂಡ ತಾಲ್ಲೂಕಿನ ಕಟ್ಟಕಡೆಯ ಸಂಗಾಪುರ ಗ್ರಾಮದಲ್ಲಿ ಸೋಮವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಕಬ್ಬು ಬೆಳೆಯಲ್ಲಿ ಬೆಳೆದಿದ್ದ ಗಾಂಜಾ ವಶಪಡಿಸಿಕೊಂಡರು.</p>.<p>ಗ್ರಾಮದ ಚಂದರ್ ರಾಠೋಡ್ ಎಂಬುವರು ತಮ್ಮ 20 ಗುಂಟೆ ಜಮೀನಿನಲ್ಲಿ ಬೆಳೆದಿದ್ದ ₹ 3.5 ಲಕ್ಷ ಮೌಲ್ಯದ 88 ಕೆಜಿ ತೂಕದ ಹಸಿ ಮತ್ತು ಒಣಗಿದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದರ್ ರಾಠೋಡ್ ಅವರ ಪುತ್ರ ರಮೇಶ ರಾಠೋಡ್ಗೆ ಪೊಲೀಸರು ಬಂಧಿಸಿದ್ದಾರೆ.</p>.<p>ಡಿವೈಎಸ್ಪಿ ವೀರಭದ್ರಯ್ಯ, ಸರ್ಕಲ್ ಇನಸ್ಪೆಕ್ಟರ್ ಮಹಾಂತೇಶ ಪಾಟೀಲ, ಸುಲೇಪೇಟ ಸರ್ಕಲ್ ಇನ್ಸ್ಪೆಕ್ಟರ್ ವಿಜಯ ಮಹಾಂತೇಶ ಮಠಪತಿ, ಚಿಂಚೋಳಿ ಸಬ್ಇನ್ಸ್ಪೆಕ್ಟರ್ ರಾಜಶೇಖರ ರಾಠೋಡ್, ಮಿರಿಯಾಣ ಸಬ್ಇನ್ಸ್ಪೆಕ್ಟರ್ ಸಂತೋಷ ರಾಠೋಡ್, ಸುಲೇಪೇಟ ಸಬ್ಇನ್ಸ್ಪೆಕ್ಟರ್ ತಿಮ್ಮಯ್ಯ ಮತ್ತು ಕುಂಚಾವರಂ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶಿವರಾಜ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.</p>.<p>ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ನೆರೆಯ ತೆಲಂಗಾಣಕ್ಕೆ ಹೊಂದಿಕೊಂಡ ತಾಲ್ಲೂಕಿನ ಕಟ್ಟಕಡೆಯ ಸಂಗಾಪುರ ಗ್ರಾಮದಲ್ಲಿ ಸೋಮವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಕಬ್ಬು ಬೆಳೆಯಲ್ಲಿ ಬೆಳೆದಿದ್ದ ಗಾಂಜಾ ವಶಪಡಿಸಿಕೊಂಡರು.</p>.<p>ಗ್ರಾಮದ ಚಂದರ್ ರಾಠೋಡ್ ಎಂಬುವರು ತಮ್ಮ 20 ಗುಂಟೆ ಜಮೀನಿನಲ್ಲಿ ಬೆಳೆದಿದ್ದ ₹ 3.5 ಲಕ್ಷ ಮೌಲ್ಯದ 88 ಕೆಜಿ ತೂಕದ ಹಸಿ ಮತ್ತು ಒಣಗಿದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದರ್ ರಾಠೋಡ್ ಅವರ ಪುತ್ರ ರಮೇಶ ರಾಠೋಡ್ಗೆ ಪೊಲೀಸರು ಬಂಧಿಸಿದ್ದಾರೆ.</p>.<p>ಡಿವೈಎಸ್ಪಿ ವೀರಭದ್ರಯ್ಯ, ಸರ್ಕಲ್ ಇನಸ್ಪೆಕ್ಟರ್ ಮಹಾಂತೇಶ ಪಾಟೀಲ, ಸುಲೇಪೇಟ ಸರ್ಕಲ್ ಇನ್ಸ್ಪೆಕ್ಟರ್ ವಿಜಯ ಮಹಾಂತೇಶ ಮಠಪತಿ, ಚಿಂಚೋಳಿ ಸಬ್ಇನ್ಸ್ಪೆಕ್ಟರ್ ರಾಜಶೇಖರ ರಾಠೋಡ್, ಮಿರಿಯಾಣ ಸಬ್ಇನ್ಸ್ಪೆಕ್ಟರ್ ಸಂತೋಷ ರಾಠೋಡ್, ಸುಲೇಪೇಟ ಸಬ್ಇನ್ಸ್ಪೆಕ್ಟರ್ ತಿಮ್ಮಯ್ಯ ಮತ್ತು ಕುಂಚಾವರಂ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶಿವರಾಜ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.</p>.<p>ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>