ಆಳಂದ: ತಾಲ್ಲೂಕಿನ ಸಾವಳೇಶ್ವರ ಗ್ರಾಮದ ಸಮೀಪ ಬೈಕ್ ಮುಗುಚಿ ಬಿದ್ದು, ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾರೆ. ಮತ್ತೊಬ್ಬ ಸವಾರ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ.
ತಾಲ್ಲೂಕಿನ ಸಾಲೇಗಾಂವ ಗ್ರಾಮದ ನಿವಾಸಿ ಶಿವಾನಂದ ಅಪ್ಪಣ್ಣ ಮಾಲಿಪಾಟೀಲ (45) ಮೃತಪಟ್ಟವರು. ಸಹೋದರ ಶಂಕರ ಮಾಲಿಪಾಟೀಲ (42) ಸ್ಥಿತಿ ಗಂಭೀರವಾಗಿದ್ದು, ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಟ್ಟಣದಲ್ಲಿ ವಾಸವಾಗಿದ್ದ ಸಹೋದರರು ಅಂಬೇವಾಡ ಗ್ರಾಮಕ್ಕೆ ಬೈಕ್ ಮೇಲೆ ತೆರಳುತ್ತಿದ್ದರು. ಸಾವಳೇಶ್ವರ ಸಮೀಪದಲ್ಲಿ ಆಕ್ಮಸಿಕವಾಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ತಡೆ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದ್ದಾರೆ.
ಸ್ಥಳಕ್ಕೆ ಸಿಪಿಐ ಬಾಸು ಚವ್ಹಾಣ, ಪಿಎಸ್ಐ ತಿರುಮಲೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.