ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳಿ ದಾಟುವಾಗ ರೈಲು ಬಡಿದು ಸಾವು

Last Updated 9 ಜನವರಿ 2021, 17:09 IST
ಅಕ್ಷರ ಗಾತ್ರ

ವಾಡಿ (ಕಲಬುರ್ಗಿ ಜಿಲ್ಲೆ): ಚಿತ್ತಾಪುರ ಬಳಿಯ ಇಟಗಿ ಗ್ರಾಮದ ಹೊರವಲಯದಲ್ಲಿ ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಗ್ರಾಮದ ಕರಿಬಸಪ್ಪ ಪಾಟೀಲ ಕೂಗನೂರ ಅವರು (64) ಶನಿವಾರ ಮಧ್ಯಾಹ್ನ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ರೈಲು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ದೇಹ ಛಿದ್ರ ಛಿದ್ರಗೊಂಡಿದೆ. ದೂರದವರೆಗೂ ದೇಹದ ಅಂಗಗಳು ಬಿದ್ದಿವೆ. ಒಂದು ಕಾಲು ಸುಮಾರು 5 ಕಿ.ಮೀ ದೂರದಲ್ಲಿ ಬಿದ್ದಿದೆ.

ಇಟಗಿ ಸಮೀಪದ ರೈಲ್ವೆ ಹಳಿ ಬಳಿಯೇ ವ್ಯಕ್ತಿಯ ಜಮೀನು ಇದ್ದು, ಹಳಿ ದಾಟುವಾಗ ಈ ದುರ್ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ವಾಡಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT