<p><strong>ಕಲಬುರಗಿ:</strong> ತಂಗಿ ಪತಿಯನ್ನು(ಭಾವ) ಕೊಲೆಗೈದ ಇಬ್ಬರು ಸಹೋದರರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹2 ಲಕ್ಷ ದಂಡ ವಿಧಿಸಿ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮೊಹಮ್ಮದ್ ಮುಜೀರ್ ಉಲ್ಲಾ ಸಿ.ಜಿ. ಆದೇಶಿಸಿದ್ದಾರೆ.</p>.<p>ಕಲಬುರಗಿಯ ಬಿದ್ದಾಪುರ ಕಾಲೊನಿ ನಿವಾಸಿಗಳಾದ ಶಿವಶಾಂತ ಲಕ್ಷ್ಮಣಗೌಡ ಮೂಲಗೆ ಹಾಗೂ ಪ್ರಶಾಂತ ಲಕ್ಷ್ಮಣಗೌಡ ಮೂಲಗೆ ಶಿಕ್ಷೆಗೆ ಒಳಗಾದವರು.</p>.<p>2022ರ ಅಕ್ಟೋಬರ್ 5ರಂದು ದಸರಾ ಹಬ್ಬದ ಅಂಗವಾಗಿ ಲಕ್ಷ್ಮಿಪುತ್ರ ಜಮಜೇನವರ ಅವರು ಪತ್ನಿ ಸಮೇತ ತಮ್ಮ ಸಂಬಂಧಿಕರಾದ ವಸಂತ ನಗರದ ಅಣ್ಣಾರಾವ ಅವಧೆ ಅವರ ಮನೆಗೆ ಬನ್ನಿ ಕೊಡಲು ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಅಪರಾಧಿಗಳು, ದುಡ್ಡಿನ ವಿಷಯವಾಗಿ ಜಗಳವಾಡಿದ್ದರು. ಬಳಿಕ ಎಳನೀರು ಕೊಚ್ಚುವ ಮಚ್ಚಿನಿಂದ ಲಕ್ಷ್ಮಿಪುತ್ರ ಅವರಿಗೆ ಹೊಡೆದು ಕೊಲೆ ಮಾಡಿದ್ದರು.</p>.<p>ಈ ಕುರಿತು ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಪಂಡಿತ ಸಗರ ಆರೋಪಿಗಳ ವಿರುದ್ಧ ಐಪಿಸಿ ಕಲಂ 34, 302ರ ಅಡಿಯಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅಪರಾಧಿಗಳಿಂದ ಸಂಗ್ರಹಿಸಿದ ದಂಡದಲ್ಲಿ ಲಕ್ಷ್ಮಿಪುತ್ರ ಜಮಜೇನವರ ಅವರ ಪತ್ನಿಗೆ ₹3.80 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ.</p>.<p>ಅಶೋಕನಗರ ಠಾಣೆಯ ಹೆಡ್ಕಾನ್ಸ್ಟೆಬಲ್ ದಾನಪ್ಪ ಹಾಗೂ ಕಾನ್ಸ್ಟೆಬಲ್ ಸುಧಾಕರ ಪ್ರಕರಣದ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಸರ್ಕಾರದ ಪರವಾಗಿ 3ನೇ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ತೇಲಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ತಂಗಿ ಪತಿಯನ್ನು(ಭಾವ) ಕೊಲೆಗೈದ ಇಬ್ಬರು ಸಹೋದರರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹2 ಲಕ್ಷ ದಂಡ ವಿಧಿಸಿ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮೊಹಮ್ಮದ್ ಮುಜೀರ್ ಉಲ್ಲಾ ಸಿ.ಜಿ. ಆದೇಶಿಸಿದ್ದಾರೆ.</p>.<p>ಕಲಬುರಗಿಯ ಬಿದ್ದಾಪುರ ಕಾಲೊನಿ ನಿವಾಸಿಗಳಾದ ಶಿವಶಾಂತ ಲಕ್ಷ್ಮಣಗೌಡ ಮೂಲಗೆ ಹಾಗೂ ಪ್ರಶಾಂತ ಲಕ್ಷ್ಮಣಗೌಡ ಮೂಲಗೆ ಶಿಕ್ಷೆಗೆ ಒಳಗಾದವರು.</p>.<p>2022ರ ಅಕ್ಟೋಬರ್ 5ರಂದು ದಸರಾ ಹಬ್ಬದ ಅಂಗವಾಗಿ ಲಕ್ಷ್ಮಿಪುತ್ರ ಜಮಜೇನವರ ಅವರು ಪತ್ನಿ ಸಮೇತ ತಮ್ಮ ಸಂಬಂಧಿಕರಾದ ವಸಂತ ನಗರದ ಅಣ್ಣಾರಾವ ಅವಧೆ ಅವರ ಮನೆಗೆ ಬನ್ನಿ ಕೊಡಲು ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಅಪರಾಧಿಗಳು, ದುಡ್ಡಿನ ವಿಷಯವಾಗಿ ಜಗಳವಾಡಿದ್ದರು. ಬಳಿಕ ಎಳನೀರು ಕೊಚ್ಚುವ ಮಚ್ಚಿನಿಂದ ಲಕ್ಷ್ಮಿಪುತ್ರ ಅವರಿಗೆ ಹೊಡೆದು ಕೊಲೆ ಮಾಡಿದ್ದರು.</p>.<p>ಈ ಕುರಿತು ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಪಂಡಿತ ಸಗರ ಆರೋಪಿಗಳ ವಿರುದ್ಧ ಐಪಿಸಿ ಕಲಂ 34, 302ರ ಅಡಿಯಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅಪರಾಧಿಗಳಿಂದ ಸಂಗ್ರಹಿಸಿದ ದಂಡದಲ್ಲಿ ಲಕ್ಷ್ಮಿಪುತ್ರ ಜಮಜೇನವರ ಅವರ ಪತ್ನಿಗೆ ₹3.80 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ.</p>.<p>ಅಶೋಕನಗರ ಠಾಣೆಯ ಹೆಡ್ಕಾನ್ಸ್ಟೆಬಲ್ ದಾನಪ್ಪ ಹಾಗೂ ಕಾನ್ಸ್ಟೆಬಲ್ ಸುಧಾಕರ ಪ್ರಕರಣದ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಸರ್ಕಾರದ ಪರವಾಗಿ 3ನೇ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ತೇಲಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>