<p><strong>ಕಲಬುರ್ಗಿ:</strong> ಸೇಡಂ ತಾಲ್ಲೂಕಿನ ಯಾನಾಗುಂದಿಯ ಮಾತೆ ಮಾಣಿಕೇಶ್ವರಿ ದೇವಿ ಅವರನ್ನು ಟ್ರಸ್ಟ್ನವರು ಒತ್ತಾಯ ಪೂರ್ವಕವಾಗಿ ಕೂಡಿಹಾಕಿದ್ದಾರೆ. ಅವರನ್ನು ಬಿಡುಗಡೆ ಮಾಡಿಸಬೇಕು ಎಂಬ ಹೇಬಿಯಸ್ ಕಾರ್ಪಸ್ ಅರ್ಜಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುದ್ದು ಹಾಜರಾಗಿ ಹೇಳಿಕೆ ನೀಡಿದರು.</p>.<p>ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಹಾಗೂ ಅಶೋಕ ನಿಜಗಣ್ಣವರ ಅವರಿದ್ದ ವಿಭಾಗೀಯ ಪೀಠದ ಎದುರು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಹಾಗೂ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹಾಜರಾದರು.</p>.<p>ಮಾತೆ ಮಾಣಿಕೇಶ್ವರಿ ಅವರ ಆರೋಗ್ಯ ತಪಾಸಣೆ ನಡೆಸಿ ವರದಿ ನೀಡುವಂತೆ ಪೀಠವು ಜಿಲ್ಲಾಡಳಿತಕ್ಕೆ ಸೂಚನೆ ನೀಡಿತ್ತು. ಮೇ 31ರಂದು ಯಾನಾಗುಂದಿಗೆ ಭೇಟಿ ನೀಡಿದ್ದ ಡಿ.ಸಿ, ಎಸ್ಪಿ ಹಾಗೂ ವೈದ್ಯಾಧಿಕಾರಿಗಳ ತಂಡ ಮಾತೆ ಮಾಣಿಕೇಶ್ವರಿ ಅವರೊಂದಿಗೆ ತೆಲುಗು ಭಾಷಾಂತರಕಾರರ ಸಹಾಯದಿಂದ ಸಂಭಾಷಣೆ ನಡೆಸಿತ್ತು.</p>.<p>ಈ ಸಂದರ್ಭದಲ್ಲಿ ಮಾತೆ ಅವರು, ತಮ್ಮನ್ನು ಯಾರೂ ಕೂಡಿ ಹಾಕಿಲ್ಲ. ತಾವು ಆರೋಗ್ಯದಿಂದ ಇರುವುದಾಗಿ ತಿಳಿಸಿದ್ದರು. ಆದರೆ ವೈದ್ಯಕೀಯ ತಪಾಸಣೆಗೆ ಒಳಪಡಲು ನಿರಾಕರಿಸಿದ್ದರು.</p>.<p>ಮಾಣಿಕೇಶ್ವರಿ ಅವರ ಕಾಲಿಗೆ ಪೆಟ್ಟಾಗಿದ್ದು, ಹಾಸಿಗೆ ಹಿಡಿದಿದ್ದಾರೆ. ನಡೆದಾಡಲು ಆಗುತ್ತಿಲ್ಲ. ಹಲವು ವರ್ಷಗಳಿಂದ ಆಹಾರ ಸೇವಿಸದೇ ಇರುವುದರಿಂದ ನಿತ್ರಾಣಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವರದಿಯಲ್ಲಿ ತಿಳಿಸಿದ್ದರು.</p>.<p>ಆದರೆ, ಖುದ್ದು ಹಾಜರಾಗಲು ಹೈಕೋರ್ಟ್ ಸೂಚಿಸಿದ್ದರಿಂದ ಡಿ.ಸಿ. ಹಾಗೂ ಎಸ್ಪಿ ಶುಕ್ರವಾರ ನ್ಯಾಯಪೀಠದ ಎದುರು ಹಾಜರಾದರು.</p>.<p>ಜೂನ್ 17ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಯಿತು.</p>.<p>ನಿಡಗುಂದಾ ಶಿವಕುಮಾರ್ ಎಂಬುವವರು ಸಲ್ಲಿಸಿದ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರಿಂದ ಕಲಬುರ್ಗಿ ಹೈಕೋರ್ಟ್ ಪೀಠ ಹಲವು ದಿನಗಳಿಂದ ಅರ್ಜಿ ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಸೇಡಂ ತಾಲ್ಲೂಕಿನ ಯಾನಾಗುಂದಿಯ ಮಾತೆ ಮಾಣಿಕೇಶ್ವರಿ ದೇವಿ ಅವರನ್ನು ಟ್ರಸ್ಟ್ನವರು ಒತ್ತಾಯ ಪೂರ್ವಕವಾಗಿ ಕೂಡಿಹಾಕಿದ್ದಾರೆ. ಅವರನ್ನು ಬಿಡುಗಡೆ ಮಾಡಿಸಬೇಕು ಎಂಬ ಹೇಬಿಯಸ್ ಕಾರ್ಪಸ್ ಅರ್ಜಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುದ್ದು ಹಾಜರಾಗಿ ಹೇಳಿಕೆ ನೀಡಿದರು.</p>.<p>ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಹಾಗೂ ಅಶೋಕ ನಿಜಗಣ್ಣವರ ಅವರಿದ್ದ ವಿಭಾಗೀಯ ಪೀಠದ ಎದುರು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಹಾಗೂ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹಾಜರಾದರು.</p>.<p>ಮಾತೆ ಮಾಣಿಕೇಶ್ವರಿ ಅವರ ಆರೋಗ್ಯ ತಪಾಸಣೆ ನಡೆಸಿ ವರದಿ ನೀಡುವಂತೆ ಪೀಠವು ಜಿಲ್ಲಾಡಳಿತಕ್ಕೆ ಸೂಚನೆ ನೀಡಿತ್ತು. ಮೇ 31ರಂದು ಯಾನಾಗುಂದಿಗೆ ಭೇಟಿ ನೀಡಿದ್ದ ಡಿ.ಸಿ, ಎಸ್ಪಿ ಹಾಗೂ ವೈದ್ಯಾಧಿಕಾರಿಗಳ ತಂಡ ಮಾತೆ ಮಾಣಿಕೇಶ್ವರಿ ಅವರೊಂದಿಗೆ ತೆಲುಗು ಭಾಷಾಂತರಕಾರರ ಸಹಾಯದಿಂದ ಸಂಭಾಷಣೆ ನಡೆಸಿತ್ತು.</p>.<p>ಈ ಸಂದರ್ಭದಲ್ಲಿ ಮಾತೆ ಅವರು, ತಮ್ಮನ್ನು ಯಾರೂ ಕೂಡಿ ಹಾಕಿಲ್ಲ. ತಾವು ಆರೋಗ್ಯದಿಂದ ಇರುವುದಾಗಿ ತಿಳಿಸಿದ್ದರು. ಆದರೆ ವೈದ್ಯಕೀಯ ತಪಾಸಣೆಗೆ ಒಳಪಡಲು ನಿರಾಕರಿಸಿದ್ದರು.</p>.<p>ಮಾಣಿಕೇಶ್ವರಿ ಅವರ ಕಾಲಿಗೆ ಪೆಟ್ಟಾಗಿದ್ದು, ಹಾಸಿಗೆ ಹಿಡಿದಿದ್ದಾರೆ. ನಡೆದಾಡಲು ಆಗುತ್ತಿಲ್ಲ. ಹಲವು ವರ್ಷಗಳಿಂದ ಆಹಾರ ಸೇವಿಸದೇ ಇರುವುದರಿಂದ ನಿತ್ರಾಣಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವರದಿಯಲ್ಲಿ ತಿಳಿಸಿದ್ದರು.</p>.<p>ಆದರೆ, ಖುದ್ದು ಹಾಜರಾಗಲು ಹೈಕೋರ್ಟ್ ಸೂಚಿಸಿದ್ದರಿಂದ ಡಿ.ಸಿ. ಹಾಗೂ ಎಸ್ಪಿ ಶುಕ್ರವಾರ ನ್ಯಾಯಪೀಠದ ಎದುರು ಹಾಜರಾದರು.</p>.<p>ಜೂನ್ 17ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಯಿತು.</p>.<p>ನಿಡಗುಂದಾ ಶಿವಕುಮಾರ್ ಎಂಬುವವರು ಸಲ್ಲಿಸಿದ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರಿಂದ ಕಲಬುರ್ಗಿ ಹೈಕೋರ್ಟ್ ಪೀಠ ಹಲವು ದಿನಗಳಿಂದ ಅರ್ಜಿ ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>