<p>ಅಫಜಲಪುರ: ‘ತಾಲ್ಲೂಕಿನ ಮಣ್ಣೂರ ಗ್ರಾಮದಲ್ಲಿ ಏ.29 ರಿಂದ ಮೇ 2ರವರೆಗೆ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಜರುಗಲಿದ್ದು, ಅದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ’ ಎಂದು ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.</p>.<p>ಈ ಕುರಿತು ಮಾಹಿತಿ ನೀಡಿದ ಅವರು, ‘29ರ ಬುಧವಾರದಂದು ಸಂಜೆ ಶಿವಬಾಳನಗರದ ಭಕ್ತರಿಂದ ನಡೆಯುವ ನಂದಿಕೋಲು ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಿ ಮಂದಿರಕ್ಕೆ ಆಗಮಿಸುವುದು. 30ರಂದು ಯಲ್ಲಮ್ಮ ದೇವಿ ಬಾಸಿಂಗ ಮೆರವಣಿಗೆ ರಾತ್ರಿ 9 ಗಂಟೆಗೆ ಮಂದಿರಕ್ಕೆ ತಲುಪಲಿದೆ’ ಎಂದು ಹೇಳಿದ್ದಾರೆ.</p>.<p>‘ಮೇ 1ರ ಆಗಿ ಹುಣ್ಣಿಮೆಯಂದು ಬೆಳಿಗ್ಗೆ 5 ಗಂಟೆಗೆ ಪಡಸಾವಳಗಿ ಮತ್ತು ಉದಗಿರಮಠದ ಶಂಭುಲಿಂಗ ಶಿವಾಚಾರ್ಯರಿಂದ ದೇವಿಗೆ ರುದ್ರಾಭಿಷೇಕ ನಡೆಯಲಿದೆ ದೇವಿಯ ಪಲ್ಲಕ್ಕಿ ಮೆರವಣಿಗೆ ಭೀಮಾ ನದಿಯಲ್ಲಿರುವ ದೇವಿಯ ಮಂದಿರಕ್ಕೆ ತಲುಪುವುದು’ ಎಂದು ಯಲ್ಲಮ್ಮ ದೇವಿ ಚಾರಿಟಬಲ್ ಮತ್ತು ವೆಲ್ಫೇರ್ ಟ್ರಸ್ಟ್ ಕಮಿಟಿಯವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-31-2042117169</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಫಜಲಪುರ: ‘ತಾಲ್ಲೂಕಿನ ಮಣ್ಣೂರ ಗ್ರಾಮದಲ್ಲಿ ಏ.29 ರಿಂದ ಮೇ 2ರವರೆಗೆ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಜರುಗಲಿದ್ದು, ಅದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ’ ಎಂದು ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.</p>.<p>ಈ ಕುರಿತು ಮಾಹಿತಿ ನೀಡಿದ ಅವರು, ‘29ರ ಬುಧವಾರದಂದು ಸಂಜೆ ಶಿವಬಾಳನಗರದ ಭಕ್ತರಿಂದ ನಡೆಯುವ ನಂದಿಕೋಲು ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಿ ಮಂದಿರಕ್ಕೆ ಆಗಮಿಸುವುದು. 30ರಂದು ಯಲ್ಲಮ್ಮ ದೇವಿ ಬಾಸಿಂಗ ಮೆರವಣಿಗೆ ರಾತ್ರಿ 9 ಗಂಟೆಗೆ ಮಂದಿರಕ್ಕೆ ತಲುಪಲಿದೆ’ ಎಂದು ಹೇಳಿದ್ದಾರೆ.</p>.<p>‘ಮೇ 1ರ ಆಗಿ ಹುಣ್ಣಿಮೆಯಂದು ಬೆಳಿಗ್ಗೆ 5 ಗಂಟೆಗೆ ಪಡಸಾವಳಗಿ ಮತ್ತು ಉದಗಿರಮಠದ ಶಂಭುಲಿಂಗ ಶಿವಾಚಾರ್ಯರಿಂದ ದೇವಿಗೆ ರುದ್ರಾಭಿಷೇಕ ನಡೆಯಲಿದೆ ದೇವಿಯ ಪಲ್ಲಕ್ಕಿ ಮೆರವಣಿಗೆ ಭೀಮಾ ನದಿಯಲ್ಲಿರುವ ದೇವಿಯ ಮಂದಿರಕ್ಕೆ ತಲುಪುವುದು’ ಎಂದು ಯಲ್ಲಮ್ಮ ದೇವಿ ಚಾರಿಟಬಲ್ ಮತ್ತು ವೆಲ್ಫೇರ್ ಟ್ರಸ್ಟ್ ಕಮಿಟಿಯವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-31-2042117169</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>