ಇದರಿಂದ ಕಂಗಾಲಾದ ಕುಟುಂಬ ಕಣ್ಣೀರಿಡುತ್ತಿದೆ. ಶಂಕರರಾವ್–ಉಮಾ ಕುಲಕರ್ಣಿ ದಂಪತಿಯ ಪುತ್ರಿ ಪ್ರಿಯಾ ಅವರ ವಿವಾಹ ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ಮನ್ನಾ ಎಖೆಳ್ಳಿ ಗ್ರಾಮದ ಅನಿರುದ್ಧ ಅವರೊಂದಿಗೆ ನಡೆಯಲಿದೆ. ಅದಕ್ಕಾಗಿ ಮುಂಚೆಯೇ ದಿನಸಿ, ಬಟ್ಟೆ, ಪಾತ್ರೆಗಳನ್ನು ಖರೀದಿಸಿ ಮನೆಯಲ್ಲಿ ಇರಿಸಲಾಗಿತ್ತು. ಶಂಕರರಾವ್ ಅವರು ಇನ್ನೊಂದು ಮನೆಯಲ್ಲಿ ವಾಸವಾಗಿದ್ದರು. ಮಂಗಳವಾರ ಬೆಳಿಗ್ಗೆ ಬಂದು ನೋಡಿದಾಗ ವಸ್ತುಗಳೆಲ್ಲ ಕಳ್ಳತನವಾಗಿದ್ದವು.