ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಗ್ರಾಮದ ಪ್ರತಿ ಓಣಿಯಲ್ಲಿ ಜಾಗೃತಿ ಜಾಥಾ ಕೈಗೊಂಡು ಕೊರೊನಾ ಮುಂಜಾಗ್ರತಾ ಕ್ರಮಗಳು ಮತ್ತು ಲಸಿಕೆ ಮಹತ್ವದ ಕುರಿತು ಮಾಹಿತಿ ನೀಡಲಾಗುತ್ತಿದೆ. ಮುಖ್ಯ ಬೀದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಜೇಶನ್ ಮಾಡಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗ್ರಾಮದಲ್ಲಿ ರೋಗ ಲಕ್ಷಣ ಇರುವವರನ್ನು ಗುರುತಿಸಬೇಕು’ ಎಂದು ಸೂಚಿಸಿದರು.