<p><strong>ವಾಡಿ:</strong> ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಗಳ ಮೇಲೆ ಇಬ್ಬರು ಮುಸುಕುಧಾರಿಗಳು ಖಾರದಪುಡಿ ಎರಚಿ ₹5 ಲಕ್ಷ ದೋಚಿದ ಘಟನೆ ಲಾಡ್ಲಾಪುರ ಸಮೀಪ ಶುಕ್ರವಾರ ಬೆಳಿಗ್ಗೆ ನಡೆದಿದೆ.</p>.<p>ಅಲಹಳ್ಳಿಯ ಜ್ಯೋತಿ ವೈನ್ಶಾಪ್ ಮ್ಯಾನೇಜರ್ ಬಾಪರೆಡ್ಡಿ ನಾಚವಾರ ಹಾಗೂ ಯಂಕಪ್ಪ ಕಟ್ಟಿಮನಿ ಅವರು ₹5 ಲಕ್ಷ ತೆಗೆದುಕೊಂಡು ಬೈಕ್ ಮೇಲೆ ತೆರಳುತ್ತಿದ್ದರು. ಈ ವೇಳೆ ಲಾಡ್ಲಾಪುರ ಹತ್ತಿರ ಅಡ್ಡಗಟ್ಟಿದ ಇಬ್ಬರು ಮುಸುಕುಧಾರಿ ವ್ಯಕ್ತಿಗಳುಮ ಅವರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಚಾಕು ತೋರಿಸಿ ಹಣ ಇರುವ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ವಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಘಟನಾ ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸಲು, ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ, ಚಿತ್ತಾಪುರ ಸಿಪಿಐ ಪಿ.ಎಸ್ ಹೊನ್ನಂಜೆಕರ, ವಾಡಿ ಪಿಎಸ್ಐ ತಿರುಮಲೇಶ ಕೆ ಹಾಗೂ ರೇಣುಕಾ ಉಡಗಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ:</strong> ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಗಳ ಮೇಲೆ ಇಬ್ಬರು ಮುಸುಕುಧಾರಿಗಳು ಖಾರದಪುಡಿ ಎರಚಿ ₹5 ಲಕ್ಷ ದೋಚಿದ ಘಟನೆ ಲಾಡ್ಲಾಪುರ ಸಮೀಪ ಶುಕ್ರವಾರ ಬೆಳಿಗ್ಗೆ ನಡೆದಿದೆ.</p>.<p>ಅಲಹಳ್ಳಿಯ ಜ್ಯೋತಿ ವೈನ್ಶಾಪ್ ಮ್ಯಾನೇಜರ್ ಬಾಪರೆಡ್ಡಿ ನಾಚವಾರ ಹಾಗೂ ಯಂಕಪ್ಪ ಕಟ್ಟಿಮನಿ ಅವರು ₹5 ಲಕ್ಷ ತೆಗೆದುಕೊಂಡು ಬೈಕ್ ಮೇಲೆ ತೆರಳುತ್ತಿದ್ದರು. ಈ ವೇಳೆ ಲಾಡ್ಲಾಪುರ ಹತ್ತಿರ ಅಡ್ಡಗಟ್ಟಿದ ಇಬ್ಬರು ಮುಸುಕುಧಾರಿ ವ್ಯಕ್ತಿಗಳುಮ ಅವರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಚಾಕು ತೋರಿಸಿ ಹಣ ಇರುವ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ವಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಘಟನಾ ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸಲು, ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ, ಚಿತ್ತಾಪುರ ಸಿಪಿಐ ಪಿ.ಎಸ್ ಹೊನ್ನಂಜೆಕರ, ವಾಡಿ ಪಿಎಸ್ಐ ತಿರುಮಲೇಶ ಕೆ ಹಾಗೂ ರೇಣುಕಾ ಉಡಗಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>