ಅಂದು ಬೆಳಿಗ್ಗೆಯಿಂದಲೇ ಮಾತಾಜಿ ಅವರ ಪಾದಪೂಜೆ, ನಾಮ ಸ್ಮರಣೆ, ಭಜನೆ, ಧಾರ್ಮಿಕ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದಿಂದ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಯಾನಾಗುಂದಿಯ ಸೂರ್ಯನಂದಿ ಕ್ಷೇತ್ರದ ಮಾತಾಜಿ ಟ್ರಸ್ಟ್ ಕಾರ್ಯದರ್ಶಿ ಶಿವಯ್ಯಾ ಸ್ವಾಮಿ ತಿಳಿಸಿದ್ದಾರೆ.