ಕಲಬುರ್ಗಿ: ಸೇಡಂ ತಾಲ್ಲೂಕಿನ ಯಾನಾಗುಂದಿಯ ಮಾತೆ ಮಾಣಿಕೇಶ್ವರಿ(87) ಶನಿವಾರ ರಾತ್ರಿ ನಿಧನರಾಗಿದ್ದು, ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ದಂಡೇ ಹರಿದು ಬರುತ್ತಿದೆ.
ಮಾಣಿಕ್ಯಗಿರಿಯ ಮೇಲ್ಭಾಗದ ಮುಖ್ಯದ್ವಾರದ ಬಳಿ ಮಾತೆ ಮಾಣಿಕೇಶ್ವರಿ ಅಮ್ಮನವರ ಪಾರ್ಥಿವ ಶರೀರವನ್ನು ಇಡಲಾಗಿದೆ. ಬಾಬುರಾವ ಚಿಂಚನಸೂರ, ಮಾಲೀಕಯ್ಯ ಗುತ್ತೇದಾರ ಸೇರಿದಂತೆ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ, ಯಾನಾಗುಂದಿ ಆಶ್ರಮದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು.
ಸರತಿ ಸಾಲಿನಲ್ಲಿ ಭಕ್ತರು ದರ್ಶನ ಪಡೆಯಲು ಸಕಲ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಇಲಾಖಾ ಅಧಿಕಾರಿಗಳಾದ ಎಸ್ಪಿ ದೇಸಾಯಿ. ಡಿವೈಎಸ್ಪಿ ಈ. ಎಸ್. ವೀರಭದ್ರಯ್ಯ, ಸಿಪಿಐ ರಾಜಶೇಖರ ಹಳಗೋದಿ, ಆನಂದರಾವ, ಪಿಎಸ್ಐ ಸುಶೀಲ್ ಕುಮಾರ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.