ಬಿಜೆಪಿಯ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ (ಅಥಣಿ), ತುಳಸಿ ಮುನಿರಾಜುಗೌಡ (ಬೆಂಗಳೂರು), ಪ್ರತಾಪ ಸಿಂಹ ನಾಯಕ್ (ಉಜಿರೆ), ಲೆಹರ್ ಸಿಂಗ್ (ಬೆಂಗಳೂರು), ಭಾರತಿ ಶೆಟ್ಟಿ (ಬೆಂಗಳೂರು), ಡಾ.ಸಾಬಣ್ಣ ತಳವಾರ (ಬೆಳಗಾವಿ) ಹಾಗೂ ರಘುನಾಥರಾವ್ ಮಲ್ಕಾಪುರೆ (ಬೀದರ್) ಅವರು ತಮ್ಮ ನೋಡಲ್ ಜಿಲ್ಲೆಯನ್ನಾಗಿ ಕಲಬುರಗಿ ಆಯ್ಕೆ ಮಾಡಿಕೊಂಡಿದ್ದೇವೆ. ಆದ್ದರಿಂದ ಮತದಾರರ ಪಟ್ಟಿಯಲ್ಲಿ ಸೇರಿಸಿ ಎಂದು ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಏಳು ಜನರ ಪೈಕಿ ದಾಖಲೆಗಳನ್ನು ಪರಿಶೀಲಿಸಿದ ಸಹಾಯಕ ಆಯುಕ್ತೆ ಮೋನಾ ರೋತ್ ಅವರು ಡಾ. ತಳವಾರ ಸಾಬಣ್ಣ ಹಾಗೂ ಪ್ರತಾಪ ಸಿಂಹ ನಾಯಕ್ ಅವರ ಮನವಿಗಳನ್ನು ತಿರಸ್ಕರಿಸಿದ್ದಾರೆ. ಉಳಿದ ಐವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ.